ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ ಬಗ್ಗೆ ಸಭೆ
ಕೊಡಗು

ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ ಬಗ್ಗೆ ಸಭೆ

December 27, 2018

ಮಡಿಕೇರಿ: ನೂತನ ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ ಸಂಬಂಧ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕಳೆದ ಬಾರಿಯ ಸಭೆಯಲ್ಲಿ ತೀರ್ಮಾನಿಸಿದಂತೆ ಬಸ್ ಸಂಚಾರ ಮಾರ್ಗದ ರಸ್ತೆ ಸಮೀಕ್ಷೆ ನಡೆಸಲಾಗಿದೆಯೇ ಎಂದು ಪ್ರಶ್ನಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಎಂಜಿನಿಯರ್ ವನಿತಾ ಮತ್ತು ನಗರ ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಸರ್ವೇ ಕಾರ್ಯ ಮಾಡಲಾಗಿದೆ. ರಾಜಾ ಸೀಟು, ಎಲ್‍ಐಸಿ ಮಾರ್ಗದ ರಸ್ತೆ ವಿಸ್ತರಣೆ ಮಾಡಬೇಕಿದ್ದು, ಒಂದು ಬದಿ ತಡೆಗೋಡೆ ನಿರ್ಮಾಣ ಮಾಡಬೇಕಿದೆ. ಅದಕ್ಕಾಗಿ ಕಾಲಾವಕಾಶ ಬೇಕಾಗಿದೆ ಎಂದು ಹೇಳಿದರು. ಇದಕ್ಕೆ ಧ್ವನಿಗೂಡಿಸಿದ ನಗರಸಭೆ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್, ರಾಜಾಸೀಟು, ಎಲ್‍ಐಸಿ ಮಾರ್ಗದ ರಸ್ತೆ ಬದಿ ಅಗಲೀಕರಣ ಸಂಬಂಧ ಸಾರ್ವ ಜನಿಕರನ್ನು ಕರೆಸಿ ಮಾತನಾಡುವುದು ಒಳ್ಳೆಯದು ಎಂದರು.

ಸದ್ಯ ಕೈಗಾರಿಕಾ ಬಡಾವಣೆಯ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ತೆಗೆದರೆ ದ್ವಿಮು ಖವಾಗಿ ವಾಹನಗಳು ಸಂಚರಿಸಬಹು ದಾಗಿದೆ ಎಂಬ ಅಭಿಪ್ರಾಯವೂ ಸಭೆ ಯಲ್ಲಿ ವ್ಯಕ್ತವಾಯಿತು.

ಸದ್ಯಕ್ಕೆ ಖಾಸಗಿ ಬಸ್‍ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ತಾತ್ಕಾಲಿಕ ವ್ಯವಸ್ಥೆ ಹಾಗೂ ಮುಂದಿನ ದೀರ್ಘಾವಧಿ ಯೋಜನೆ ಬಗ್ಗೆ ಯೋಚಿಸಬೇಕಿದೆ ಎಂದು ಜಿಲ್ಲಾ ಧಿಕಾರಿ ತಿಳಿಸಿದರು. ಕೈಗಾರಿಕಾ ಬಡಾವಣೆ ಯಲ್ಲಿ ಪಾದಚಾರಿ ಮಾರ್ಗ ವ್ಯವಸ್ಥಿತ ವಾಗಿ ನಿರ್ಮಾಣ ಮಾಡಬೇಕು ಎಂದು ಹಲವರು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಇತರರು ಹಲವು ಸಲಹೆ ನೀಡಿದರು. ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉನ್ನೀಕೃಷ್ಣ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಪೌರಾಯುಕ್ತ ಎಂ.ಎಲ್.ರಮೇಶ್, ಎಇಇ ಹೇಮಂತ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಇತರರು ಇದ್ದರು.

Translate »