ಪ್ರವಾಸಿ ತಾಣ, ರೇಷ್ಮೆ ಇಲಾಖೆ ಕೇಂದ್ರಗಳಿಗೆ ಸಚಿವ ಸಾರಾ ಮಹೇಶ್ ಭೇಟಿ
ಚಾಮರಾಜನಗರ

ಪ್ರವಾಸಿ ತಾಣ, ರೇಷ್ಮೆ ಇಲಾಖೆ ಕೇಂದ್ರಗಳಿಗೆ ಸಚಿವ ಸಾರಾ ಮಹೇಶ್ ಭೇಟಿ

November 27, 2018

ಚಾಮರಾಜನಗರ:  ಪ್ರವಾಸೋ ದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ರೇಷ್ಮೆ ಇಲಾಖೆ ಕೇಂದ್ರ, ಮಾರು ಕಟ್ಟೆಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿ ವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಸಂಸದ ಆರ್. ಧ್ರುವ ನಾರಾಯಣ, ಶಾಸಕ ಎನ್.ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ.ಯೋಗೀಶ್ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಬೆಳಿಗ್ಗೆಯಿಂದಲೇ ಪ್ರವಾಸೋದ್ಯಮ, ರೇಷ್ಮೆ ಸಚಿವರು ಭೇಟಿ ನೀಡುವ ಕಾರ್ಯಕ್ರಮ ಆರಂಭಿಸಿದರು.
ಮೊದಲಿಗೆ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿಕೊಟ್ಟ ಸಚಿವರು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾಗಿರುವ ಯಾತ್ರಿ ನಿವಾಸವನ್ನು ಪರಿಶೀಲಿಸಿದರು. ಇನ್ನು ಉಪಯೋಗ ಮಾಡದ ಯಾತ್ರಿ ನಿವಾಸ ಕಟ್ಟಡವನ್ನು ಸದ್ಬಳಕೆ ಮಾಡಿಕೊ ಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮ ಗಳಿಗೆ ತುರ್ತಾಗಿ ಮುಂದಾಗುವಂತೆ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಿಳಿಗಿರಿರಂಗನ ದೇವಾಲಯದಲ್ಲಿ ದೇವರ ದರ್ಶನ ಪಡೆದರು. ಬಳಿಕ ಪ್ರಾಚ್ಯವಸ್ತು ಇಲಾಖೆ ವತಿಯಿಂದ ಕೈಗೊಂಡಿರುವ ದೇವಾ ಲಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಮೆಟ್ಟಿಲುಗಳ ನಿರ್ಮಾಣ ಸಂಬಂಧ ಮಾಹಿತಿ ಪಡೆದ ಸಚಿವರು ನಿರ್ಮಾಣ ಮಾಡಬೇಕಿರುವ ಸ್ಥಳವನ್ನು ಪರಿಶೀಲಿಸಿದರು. ನಂತರ ದೇವಾಲಯ ಆವರಣಕ್ಕೆ ಹೊಂದಿಕೊಂಡಂತೆ ಇರುವ ವೀಕ್ಷಣಾ ಪ್ರದೇಶವನ್ನು ಸಹ ವೀಕ್ಷಿಸಿ ಈ ಕುರಿತು ಅಭಿವೃದ್ದಿಪಡಿಸಲು ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

ತದನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಳಿಗಿರಿರಂಗನ ದೇವಾಲಯ ಹಾಗೂ ಇದರ ಸುತ್ತಮುತ್ತಲ ಪ್ರದೇ ಶವನ್ನು ಅಭಿವೃದ್ಧಿಗೊಳಿಸುವುದರೊಂದಿಗೆ ಪ್ರವಾಸೋದ್ಯಮ ಪ್ರಗತಿ ಹೊಂದಲು ಅಗತ್ಯವಿರುವ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ದೇವಾಲಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕು. ಮೆಟ್ಟಿಲುಗಳು ನಿರ್ಮಾಣ ಕಾರ್ಯವು ತ್ವರಿತವಾಗಿ ಕೈಗೆತ್ತಿ ಕೊಳ್ಳಬೇಕು. ವೀಕ್ಷಣಾ ಸ್ಥಳ ಸೇರಿದಂತೆ ದೇವಾಲಯದ ಸುತ್ತಲೂ ಆಕರ್ಷಿಸುವ ಸೌಲಭ್ಯ ಕಲ್ಪಿಸಲು ನೀಲಿ ನಕ್ಷೆಯನ್ನು ತಯಾರಿಸಬೇಕು. ಉದ್ಯಾನವನ ಮಾದರಿ ಯಲ್ಲಿ ನಿರ್ಮಿಸಲು ಅಗತ್ಯ ಪ್ರಸ್ತಾವನೆ ತಯಾರಿಸಬೇಕು. ಜಿಲ್ಲಾ ಉಸ್ತುವಾರಿ ಸಚಿ ವರು, ಜಿಲ್ಲಾ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ದೇವಾಲಯ ಪ್ರದೇಶ ಅಭಿವೃದ್ಧಿ ಸಂಬಂಧ ಪ್ರತ್ಯೇಕ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವ ಎಲ್ಲ ಕಾರ್ಯಗಳಿಗೆ ತಾವು ಅಗತ್ಯ ನೆರವು ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟ ರಂಗಶೆಟ್ಟಿ ಮಾತನಾಡಿ, ದೇವಾಲಯದ ಅಭಿವೃದ್ಧಿ ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದರು.
ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಸೌಕರ್ಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಅದೇರೀತಿ ಬಿಳಿಗಿರಿರಂಗ ನಬೆಟ್ಟಕ್ಕೂ ಅವಶ್ಯವಿರುವ ಮೂಲ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿ ಕೈಗೊಂಡು ರೂಪಿಸಲು ಒತ್ತು ನೀಡಬೇ ಕಾಗಿದೆ. ಈ ನಿಟ್ಟಿನಲ್ಲಿ ಬಿಳಿಗಿರಿರಂಗನಬೆಟ್ಟ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಯೋಜನೆ ತಯಾರಿಸಿ ಅನುಷ್ಠಾನ ಮಾಡಬೇಕು ಎಂದು ಸಲಹೆ ಮಾಡಿದರು.

ಶಾಸಕರಾದ ಎನ್.ಮಹೇಶ್ ಮಾತ ನಾಡಿ, ಬಿಳಿಗಿರಿರಂಗನಬೆಟ್ಟ ದೇವಾಲಯ ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಆದ್ಯತೆ ನೀಡಬೇಕಿದೆ. ಬಿಳಿಗಿರಿರಂಗನ ಬೆಟ್ಟದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಆರಂಭ ವಾಗಬೇಕು. ತ್ಯಾಜ್ಯ ವಿಲೇವಾರಿಗೆ ಜಾಗ ಗುರುತಿಸಬೇಕು. ಕಂದಾಯ, ಅರಣ್ಯ ಅಧಿಕಾರಿಗಳು ಸಭೆ ನಡೆಸಿ ಭೂಮಿ ಕುರಿತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.
ಬಳಿಕ ಸಚಿವರು ಬಿಳಿಗಿರಿರಂಗನಬೆಟ್ಟದ ವ್ಯಾಪ್ತಿಯಲ್ಲಿರುವ ರೇಷ್ಮೆ ಇಲಾಖೆಯ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ದರು. ಅಲ್ಲಿಯೇ ಇದ್ದ ಅನುಪಯುಕ್ತ ಕಟ್ಟಡ ಜಾಗದಲ್ಲಿ ಹಸಿರುಮಯ ವಾತಾ ವರಣ ನಿರ್ಮಾಣ ಮಾಡಲು ಸೂಚಿಸಿದರು.
ಯಳಂದೂರಿನ ಇತಿಹಾಸ ಪ್ರಸಿದ್ದ ಬಳೇ ಮಂಟಪ, ದಿವಾನ್ ಪೂರ್ಣಯ್ಯ ವಸ್ತು ಸಂಗ್ರಹಾಲಯ, ಸಂತೇಮರಹಳ್ಳಿಯ ರೇಷ್ಮೆ ಫಿಲೇಚರ್, ರೇಷ್ಮೆಗೂಡು ಮಾರುಕಟ್ಟೆ, ಕುದೇರಿನ ರೇಷ್ಮೆ ಇಲಾಖೆಗೆ ಸೇರಿದ ಸ್ಥಳಗ ಳಿಗೂ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ.ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್‍ಕುಮಾರ್, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ಧನ್, ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Translate »