ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಮೈಸೂರು

ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

June 3, 2019

ಬೆಂಗಳೂರು: ಪ್ರಗತಿಪರ ಚಿಂತಕ ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕ ರಣವನ್ನು ಭೇದಿಸುವಲ್ಲಿ ಎಸ್‍ಐಟಿ ತಂಡ ಮಹತ್ವದ ಘಟ್ಟಕ್ಕೆ ತಲುಪಿದ್ದು, ಮುಖ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿ ಕೃಷ್ಣಮೂರ್ತಿ ಎಂಬಾತ ನನ್ನು ಪೆÇಲೀಸರು ಬಂಧಿಸಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಹೇಳಿಕೆಯ ಮೇರೆಗೆ ಕೃಷ್ಣಮೂರ್ತಿಯನ್ನು ಎಸ್‍ಐಟಿ ಪೆÇಲೀಸರು
ವಶಕ್ಕೆ ಪಡೆದಿದ್ದಾರೆ.

ಎಂ.ಎಂ.ಕಲ್ಬುರ್ಗಿ ಹತ್ಯೆ ಕೇಸ್ ನಲ್ಲಿ ಆರೋಪಿ ಕೃಷ್ಣಮೂರ್ತಿ ಬೈಕ್ ಓಡಿಸಿದ್ದು, ಗಣೇಶ್ ಮಸ್ಕಿನ್ ಗುಂಡು ಹಾರಿಸಿದ್ದಾಗಿ ದೃಢಪಟ್ಟಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ದೊರೆತ ದೃಶ್ಯಗಳಲ್ಲಿ ಕೃಷ್ಣಮೂರ್ತಿ ಹಾಗೂ ಗಣೇಶ್ ಮುಖ ಚಹರೆ ಹೊಂದಾಣಿಕೆ ಇದೆ. ಬಂಧನದ ಬಳಿಕ ಬೆಂಗಳೂರಿಗೆ ಕರೆ ತಂದಿರುವ ಎಸ್‍ಐಟಿ ತಂಡ, ಬೆಂಗಳೂರಿನಲ್ಲಿ ರಹಸ್ಯ ಸ್ಥಳದಲ್ಲಿ ಮುಖ್ಯ ಆರೋಪಿ ಕೃಷ್ಣಮೂರ್ತಿ ಯನ್ನು ತೀವ್ರ ವಿಚಾರಣೆ ನಡೆಸುತ್ತಿದೆ.

Translate »