ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ
ಮೈಸೂರು

ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ

January 3, 2020

ಬೆಂಗಳೂರು,ಜ.2- ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜ ಕೀಯದ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಸನ್ಮಾನ್ಯ ಯಡಿಯೂರಪ್ಪ ಅವರೇ, ನಿಮ್ಮದೇ ಪಕ್ಷದ ಹಿರಿಯ ನಾಯಕರ ಸಾರಥ್ಯದ ಪತ್ರಿಕೆಯಲ್ಲಿ ಪ್ರಕಟ ವಾಗಿರುವ ಈ ವರದಿಗಳನ್ನು ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಅವರನ್ನು ಭಾಷಣದಲ್ಲಿ ಉತ್ತರಿಸಲು ಹೇಳಿ ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ `ಕಗ್ಗತ್ತಲಿನಲ್ಲಿ ಭಾರತ’ ಎಂಬ ಪತ್ರಿಕೆಯ ತುಣುಕನ್ನು ಅಪ್‍ಲೋಡ್ ಮಾಡಿದ್ದಾರೆ.

ಉತ್ತರ ಕೊಡಿ ಮೋದಿ ಎಂಬ ಹ್ಯಾಶ್ ಟ್ಯಾಗನ್ನೂ ಅದರೊಂದಿಗೆ ಸೇರಿಸಿದ್ದಾರೆ. ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (ಓಖಆWP ಎನ್‍ಆರ್‍ಡಿಡಲ್ಬ್ಯುಪಿ) ಮತ್ತು ನರೇಗಾ ಯೋಜನೆ ಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ನರೇಂದ್ರ ಮೋದಿ ಅವರೇ, ಈ ಮಾಹಿತಿಯನ್ನು ಬಿಎಸ್‍ವೈ ಬಿಜೆಪಿ ಅವರನ್ನೇ ಕೇಳಿ ತಿಳ್ಕೊಂಡು ರಾಜ್ಯದ ಜನತೆಗೆ ಹೇಳಿ ಬಿಡಿ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ಘೋಷಣೆ ನೆನಪಿ ದೆಯೇ? ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ, ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ 8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ? ರಾಜ್ಯಕ್ಕೆ ಜಿಎಸ್‍ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರಬೇಕು. ಕಳೆದ ಸೆಪ್ಟೆಂಬರ್‍ನಿಂದ ಒಂದು ಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ನರೇಂದ್ರ ಮೋದಿ ಅವರೇ ಕೇಂದ್ರ ಸರ್ಕಾರ ವನ್ನು ದಿವಾಳಿ ಮಾಡುತ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ?, ಉತ್ತರ ಕೊಡಿ ಮೋದಿ ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ.

ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.50 ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ? ಎಂದು ಮತ್ತೊಂದು ಟ್ವೀಟ್‍ನಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ. ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್‍ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ, ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯ ಬದ್ಧ ಪಾಲೂ ಕೊಡಲಿಲ್ಲ, ಈಗ ಯಾವ ಮುಖ ಹೊತ್ತು ರಾಜ್ಯಕ್ಕೆ ಬರ್ತಿ ದ್ದೀರಿ ನರೇಂದ್ರ ಮೋದಿ ಅವರೇ? ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ, ತುಟಿ ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡ ಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯ ಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗು ತ್ತಿದ್ದಾರಾ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಉತ್ತರ ಕೊಡಿ ಮೋದಿ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

Translate »