ಬಹುಕೋಟಿ ಮೇವು ಹಗರಣ: ಲಾಲುಪ್ರಸಾದ್‍ಗೆ  ಜಾಮೀನು ನಿರಾಕರಿಸಿದ ಸುಪ್ರಿಂಕೋರ್ಟ್
ಮೈಸೂರು

ಬಹುಕೋಟಿ ಮೇವು ಹಗರಣ: ಲಾಲುಪ್ರಸಾದ್‍ಗೆ ಜಾಮೀನು ನಿರಾಕರಿಸಿದ ಸುಪ್ರಿಂಕೋರ್ಟ್

April 11, 2019

ನವದೆಹಲಿ: ಬಹುಕೋಟಿ ಮೇವು ಹಗರಣದ ರೂವಾರಿ ಲಾಲೂ ಪ್ರಸಾದ್ ಯಾದವ್‍ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯ ಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಾಪೀಠ ಲಾಲೂ ಗೆ ಜಾಮೀನು ನೀಡಲು ನಿರಾಕರಿಸಿದೆ. ಕಳೆದ 24 ತಿಂಗಳಿಂದ ಜೈಲಿನಲ್ಲೇ ಇದ್ದು, ಹೀಗಾಗಿ ಜಾಮೀನು ನೀಡಬೇಕೆಂದು ಲಾಲೂ ಮನವಿ ಮಾಡಿದ್ದರು, ನಿಮಗೆ ವರ್ಷ ಜೈಲು ಶಿಕ್ಷೆಯಾಗಿದೆ, ಅದರಲ್ಲಿ 24ತಿಂಗಳು ಏನೇನೂ ದೊಡ್ಡದಲ್ಲ ಎಂದು ಕೋರ್ಟ್ ತಿಳಿಸಿದೆ. ಯಾದವ್ ಪರ ವಾದ ಮಂಡಿಸಿದ ವಕೀಲ್ ಕಪಿಲ್ ಸಿಬಲ್ ಪ್ರಕರಣ ಸಂಬಂಧ ಯಾವುದೇ ಸಾಮಗ್ರಿಗಳನ್ನು ವಶಪಡಿಸಿಕೊಂಡಿಲ್ಲ, ಪಿತೂರಿಯಿಂದಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲು ಸಿಬಿಐ ತೀವ್ರ ವಿರೋಧ ವ್ಯಕ್ತಪಡಿ ಸಿತ್ತು. ಸುಪ್ರೀಂ ಕೋರ್ಟ್‍ಗೆ ಆಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಒಂದು ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದರೆ, ಲೋಕಸಭೆ ಚುನಾವಣೆ ಹಿನೆÀ್ನಲೆಯಲ್ಲಿ ಆರೋಪಿ ರಾಜಕೀಯ ಚಟುವಟಿಕೆಯಲ್ಲಿ ತೊಡಗುತ್ತಾರೆ ಎಂದು ಹೇಳಿತ್ತು.

Translate »