ನನ್ನ ಅಪ್ಪನನ್ನು ಕೆಳಗಿಳಿಸಲು ಸಾಧ್ಯವಿಲ್ಲ
ಮೈಸೂರು

ನನ್ನ ಅಪ್ಪನನ್ನು ಕೆಳಗಿಳಿಸಲು ಸಾಧ್ಯವಿಲ್ಲ

November 1, 2020

ಬೆಂಗಳೂರು, ಅ.31 (ಕೆಎಂಶಿ)- ಮುಖ್ಯಮಂತ್ರಿ ಸ್ಥಾನದಿಂದ ನನ್ನ ಅಪ್ಪ ನನ್ನು (ಯಡಿಯೂರಪ್ಪ) ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಸಂಘಟನೆ, ಬಲವರ್ಧ ನೆಗೆ ಅವರ ಕೊಡುಗೆ ಅನನ್ಯ. ಅವರೇ ಪಕ್ಷ ಸಂಘ ಟಿಸುವ ಮೂಲಕ ಸರ್ಕಾರವನ್ನು ಅಧಿಕಾರಕ್ಕೆ ತಂದಿ ದ್ದಾರೆ. ಇದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದ ಲಾವಣೆ ಇಲ್ಲ ಎಂದು ಪಕ್ಷದ ರಾಜ್ಯಾ ಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಸ್ಪಷ್ಟಪಡಿಸಿದ್ದಾರೆ. ಇದಾದ ನಂತರವೂ ಅಂತಹ ಪ್ರಸ್ತಾಪ ಸರಿಯಲ್ಲ. ಪ್ರತಿಪಕ್ಷದ ನಾಯಕರು ಚುನಾವಣೆ ಗಿಮಿಕ್ ಆಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಪಕ್ಷ ಸಂಘಟನೆ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರು ವುದು ಎಷ್ಟು ಕಷ್ಟ ಎಂಬುದು ಎಲ್ಲರಿಗೂ ತಿಳಿದಿದೆ. ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಒಂದು ಬಾರಿ ಭರವಸೆ ನೀಡಿದರೆ, ಅದು ಈಡೇರಿದಂತೆ ಎಂದು ಖಾಸಗಿ ಚಾನಲ್‍ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 4ನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಹಲವು ಸಂಕಷ್ಟಗಳು ಎದುರಾಗಿವೆ. ಅದನ್ನು ಅವರು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಸತತವಾಗಿ ನೆರೆ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರ ಕಲ್ಪಿಸುವುದರಲ್ಲಿ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ. ಕೊರೊನಾ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಗಳನ್ನು ನಮ್ಮ ಸರ್ಕಾರ ಕೈಗೊಂಡಿದೆ. ಚುನಾವಣೆಗಾಗಿ ಪ್ರತಿಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪಚುನಾ ವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಧೂಳೀಪಟವಾಗಲಿವೆ ಎಂದರು.

Translate »