ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ, ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ರಕ್ತದಾನ ಶಿಬಿಉ್ಪ
ಮೈಸೂರು

ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ, ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ರಕ್ತದಾನ ಶಿಬಿಉ್ಪ

April 29, 2021

ಮೈಸೂರು, ಏ.28- ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿ ವೃದ್ಧಿ ಸಂಘದ ವತಿಯಿಂದ ಸ್ವಯಂಪ್ರೇರಿತವಾಗಿ 20 ಚಾಲಕರು ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು. ಇಂತಹ ರಕ್ತ ದಾನಿಗಳಿಗೆ ಪ್ರಮಾಣ ಪತ್ರ ನೀಡಿ, ಅಭಿನಂದಿ ಸಲಾಯಿತು. ರಕ್ತದಾನ ಕುರಿತು ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ಮಹಾ ಮಾರಿ ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರ ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಯುವಕ-ಯುವತಿಯರು ನೆರವಾಗಬೇಕೆಂದು ಮನವಿ ಮಾಡಿಕೊಂಡರು.

ಲಾಕ್‍ಡೌನ್‍ನಲ್ಲಿ ಸರ್ಕಾರವು ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಿದಾಗ ದೇಶಾದ್ಯಂತ ರಕ್ತ ನಿಧಿಗಳು ರಕ್ತದ ಕೊರತೆಯನ್ನು ಎದುರಿಸುತ್ತಿದ್ದು, ಕೊರೊನಾ ಲಸಿಕೆ ಪಡೆದವರಿಂದ ಕಡ್ಡಾಯವಾಗಿ 4 ವಾರಗಳವರೆಗೆ ರಕ್ತ ಸಂಗ್ರಹ ಮಾಡುವಂತಿಲ್ಲ ಎಂದು ರಾಷ್ಟ್ರೀಯ ರಕ್ತ ವರ್ಗಾವಣೆ ಮಂಡಳಿ ಸೂಚಿಸಿದೆ. ಆಸ್ಪತ್ರೆಗಳಲ್ಲಿ ರಕ್ತದ ಅವಶ್ಯಕತೆ ಬಹಳಷ್ಟು ಸಂದರ್ಭಗಳಲ್ಲಿ ಇರುತ್ತದೆ. ಅಪಘಾತ, ಹೆರಿಗೆ, ಶಸ್ತ್ರ ಚಿಕಿತ್ಸೆ ವೇಳೆ, ಕ್ಯಾನ್ಸರ್ ರೋಗಿಗಳಿಗೆ, ಡಯಾಲಿಸಿಸ್ ರೋಗಿಗಳು ಸೇರಿದಂತೆ ಇನ್ನಿತರ ರೋಗಗಳಿಗೆ ರಕ್ತ ಅತ್ಯಗತ್ಯ. ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯವಂತ ನಾಗರಿಕರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳುವ ಮೊದಲೇ ರಕ್ತದಾನ ಮಾಡಬೇಕು. ಆಸ್ಪತ್ರೆಗಳಲ್ಲಿ ರಕ್ತದ ಅಗತ್ಯ ಪೂರೈಸುವ ಸಲುವಾಗಿ ಆರೋಗ್ಯವಂತ ನಾಗರಿಕರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳುವ ಮೊದಲೇ ರಕ್ತದಾನ ಮಾಡುವ ಬಗ್ಗೆ ಚಿಂತನೆ ಮಾಡಬೇಕು. ಲಸಿಕೆ ಹಾಕಿಸಿಕೊಳ್ಳುವಂತಹ ಸಂದರ್ಭದಲ್ಲಿ ಅಲ್ಲಿ ಇದ್ದಂಥ ಅಧಿಕಾರಿಗಳು ರಕ್ತದಾನದ ಬಗ್ಗೆ ಜಾಗೃತಿ ಮೂಡಿ ಸಬೇಕು ಎಂದು ಹೇಳಿದರು. ರಕ್ತದಾನ ಮಾಡಲು ಇಚ್ಛಿಸುವ ದಾನಿಗಳು ಈ ಕೇಂದ್ರದ ದೂರವಾಣಿ: 9243781900 ಸಂಪರ್ಕಿಸಿದರೆ ಮನೆಯಿಂದ ಕರೆದು ಕೊಂಡು ಬಂದು, ರಕ್ತದಾನ ಮಾಡಿದ ನಂತರ ಸುರಕ್ಷಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಿ ಕೊಡಲಾಗುವುದು. ಅಲ್ಲದೆ ದಾನಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದರಿಂದ ಮುಂದೆ ಅವರಿಗೆ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅಗತ್ಯವಿದ್ದಾಗ ಪ್ರಮಾಣಪತ್ರ ತೋರಿಸಿ ಉಚಿತವಾಗಿ ರಕ್ತ ಪಡೆಯ ಬಹುದು ಎಂದು ಹೇಳಿದರು ವ್ಯವಸ್ಥಾಪಕ ಸ್ಯಾಮ್ಯುಯೆಲ್ ವಿಲ್ಸನ್, ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷ ಪ್ರಭಾಕರ್, ಉಪಕಾರ್ಯದರ್ಶಿ ಪುಟ್ಟಬುದ್ಧಿ, ಮಂಜುನಾಥ್ ಮತ್ತಿತರರು ಹಾಜರಿದ್ದರು.

Translate »