ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ
ಹಾಸನ

ಹೆಚ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

June 9, 2018

ಹಾಸನ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಅವರನ್ನು ಅವಿರೋಧವಾಗಿ ಆಯ್ಕೆಯಾದರು.

ನಗರದ ಹೆಚ್‍ಡಿಸಿಸಿ ಬ್ಯಾಂಕ್ ಮುಂದಿನ ಅವಧಿಗೆ ಶುಕ್ರವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಯಾರು ನಾಮ ಪತ್ರ ಸಲ್ಲಿಸದ ಕಾರಣ ಮಧ್ಯಾಹ್ನದ ವೇಳೆಗೆ ನಾಗರಾಜು ಸೋಮನಹಳ್ಳಿ ಮತ್ತು ಉಪಾಧ್ಯಕ್ಷರಾಗಿ ಗಿರೀಶ್ ಚನ್ನವೀರಪ್ಪ ಆಯ್ಕೆಗೊಂಡರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ನಾಗರಾಜು ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಸಚಿವ ಹೆಚ್.ಡಿ.ರೇವಣ್ಣ ಸೇರಿದಂತೆ ಜೆಡಿಎಸ್ ಮುಖಂಡರ ಆಶೀರ್ವಾದದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ನನಗೆ ನೀಡಿರುವÀ ಜವಾಬ್ದಾರಿಯನ್ನು ಜಾಗರೂಕತೆಯಿಂದ ನಿಭಾಯಿಸುತ್ತೇನೆ. ರೈತರ ಪರವಾಗಿ ಬ್ಯಾಂಕ್ ಇರುತ್ತದೆ ಎಂದು ಹೇಳಿದರು.

ನಂತರ ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಮಾತನಾಡಿದರು. ಸಚಿವ ಹೆಚ್.ಡಿ.ರೇವಣ್ಣ, ಬಾಂಕಿನ ಮಾಜಿ ಅಧ್ಯಕ್ಷ ಹೊನ್ನವಳ್ಳಿ ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಚನ್ನವೀರಪ್ಪ, ಸಿಟಿ ಕೋ-ಆಪರೇಟಿವ್ ಮಾಜಿ ಅಧ್ಯಕ್ಷ ಚಂದ್ರಶೇಖರ್(ಚಂದ್ರು), ಯಶವಂತ್, ಎಪಿಎಂಸಿ ಜಯರಾಂ, ಲಕ್ಷ್ಮಣ್, ಸೋಮನಾಯಕ್ ಇತರರು ಅಭಿನಂದಿಸಿದರು.

Translate »