ನಾಲ್ವಡಿ ಜಯಂತಿ: 10 ಸಾಧಕರಿಗೆ ಪ್ರಶಸ್ತಿ ನೀಡಲು ಜಿಲ್ಲಾಡಳಿತ ನಿರ್ಧಾರ
ಮೈಸೂರು

ನಾಲ್ವಡಿ ಜಯಂತಿ: 10 ಸಾಧಕರಿಗೆ ಪ್ರಶಸ್ತಿ ನೀಡಲು ಜಿಲ್ಲಾಡಳಿತ ನಿರ್ಧಾರ

June 11, 2020

ಮೈಸೂರು, ಜೂ.10(ಎಸ್‍ಪಿಎನ್)-ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದಂದು ಪ್ರತಿ ವರ್ಷ ವಿವಿಧ ಕ್ಷೇತ್ರದ 10 ಮಂದಿ ಸಾಧಕರನ್ನು ಗುರು ತಿಸಿ ಪ್ರಶಸ್ತಿ ನೀಡುವುದಾಗಿ ಮೈಸೂರು ಜಿಲ್ಲಾಡಳಿತ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಾಧಕರನ್ನು ಗುರುತಿಸಲು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕರ್ನಾಟಕ ಜನಪದ ಅಕಾಡೆಮಿ ಮಾಜಿ ಅಧ್ಯಕ್ಷ ಹಿ.ಶಿ.ರಾಮಚಂದ್ರೇಗೌಡ, ಹಿರಿಯ ಸಾಹಿತಿಗಳಾದ ಪ್ರೊ.ಸಿ.ನಾಗಣ್ಣ, ಎನ್.ಎಸ್.ತಾರಾನಾಥ್ ಅವರನ್ನು ಆಯ್ಕೆ ಸಮಿತಿಗೆ ನೇಮಕ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ ಸಮಿತಿಯಲ್ಲಿರುವರು. ಕೂಡಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಸಾಧಕರನ್ನು ಗುರುತಿಸುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಮಿತಿಗೆ ಸೂಚಿಸಿದ್ದಾರೆ.

Translate »