ಬೆಂಗಳೂರಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಮುಂದಿನ ವಾರ್ಷಿಕ ಸಭೆ
News

ಬೆಂಗಳೂರಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಮುಂದಿನ ವಾರ್ಷಿಕ ಸಭೆ

September 27, 2021

ನವದೆಹಲಿ,ಸೆ.26-ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿಯ ಮುಂದಿನ ವಾರ್ಷಿಕ ಸಭೆಯನ್ನು 2022ರ ಜನವರಿ ಯಲ್ಲಿ ಬೆಂಗಳೂರಿನಲ್ಲಿ ನಡೆಸುವಂತೆ ಮಹಾ ಮಂಡಳಿಯ ನಿರ್ದೇಶಕರೂ ಆದ ಕರ್ನಾ ಟಕದ ಸಹಕಾರ ಸಚಿವ ಎಸ್.ಟಿ.ಸೋಮ ಶೇಖರ್ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಅಧ್ಯಕ್ಷ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹಾ ಮಂಡಳಿ ಕಚೇರಿಯಲ್ಲಿ ಭಾನುವಾರ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಅವರು, ಮುಂದಿನ ಸಭೆಯನ್ನು ಬೆಂಗ ಳೂರಿನಲ್ಲಿ ನಡೆಸುವಂತೆ ಒತ್ತಾಯಿಸಿದರು.

ಸಭೆಯಲ್ಲಿ ಮಹಾರಾಷ್ಟ್ರ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ, ಹರಿ ಯಾಣ ಸೇರಿದಂತೆ ಸಭೆಯಲ್ಲಿ 15ಕ್ಕೂ ಹೆಚ್ಚು ರಾಜ್ಯಗಳ ನಿರ್ದೇಶಕರು ಭಾಗವಹಿ ಸಿದ್ದರು. ರಾಷ್ಟ್ರೀಯ ವಸತಿ ನೀತಿ ಜಾರಿ ಗೊಳಿಸುವ ಸಂಬಂಧ ವಿಸ್ತೃತ ಚರ್ಚೆ ನಡೆಸಲಾಯಿತು. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ಬೆಲೆ ಯಲ್ಲಿ ನಿವೇಶನ ದೊರಕಿಸಿಕೊಡುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರುವ ಕೆಲ ಅಡೆತಡೆಯನ್ನು ಪರಿಹರಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಲು ಸಭೆ ತೀರ್ಮಾನಿಸಿತು. ಅಲ್ಲದೆ ಎಲ್ಲಾ ರಾಜ್ಯಗಳಲ್ಲೂ ಸಹಕಾರಿ ವಸತಿ ಮಹಾಮಂಡಳಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲ ತಿದ್ದುಪಡಿ ತರಲು ಚರ್ಚೆ ನಡೆಸಲಾಯಿತು. ಸಚಿವ ಎಸ್.ಟಿ.ಸೋಮ ಶೇಖರ್ 21 ವರ್ಷಗಳಿಂದ ಕರ್ನಾಟಕ ರಾಜ್ಯ ವಸತಿ ಮಹಾಮಂಡಳಿ ಅಧ್ಯಕ್ಷರಾಗಿ ಹಾಗೂ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Translate »