ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ `9’ರ ಕಂಟಕ ಸಾಬೀತಾಗಿದೆಮಾಜಿ ಸಚಿವ ಎ.ಮಂಜು
ಮೈಸೂರು

ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ `9’ರ ಕಂಟಕ ಸಾಬೀತಾಗಿದೆಮಾಜಿ ಸಚಿವ ಎ.ಮಂಜು

July 25, 2019

ಮೈಸೂರು,ಜು.24(ಎಂಟಿವೈ)-ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ 9ರ ಕಂಟಕವಿದೆ ಎಂದು ನಾನು ಮೊದಲೇ ಹೇಳಿದ್ದೆ. ಅದು ಸಾಬೀತಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎ.ಮಂಜು ಹೇಳಿದರು.

ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಬುಧ ವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದ ಅವರು, ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿ, 1999, 2009, 2019ರಲ್ಲಿ ನಡೆದ ಚುನಾವಣೆಯಲ್ಲಿ ಗೌಡರ ಕುಂಟುಂಬಕ್ಕೆ ಸೋಲಾಗಿದೆ. ಅವರ ಕುಟುಂಬಕ್ಕೆ 9 ಸರಿ ಬರುವು ದಿಲ್ಲ ಎಂದಿದ್ದೆ. ಅದು ಇಂದು ಸಾಬೀತಾಗಿದೆ. ಎಲ್ಲರಿಗೂ ದೇವರು ಇರುತ್ತಾರೆ. ಕೇವಲ ಅವರಿಗೆ ಮಾತ್ರ ದೇವರು ಇರುವುದಿಲ್ಲ. ಮಂಗಳವಾರದಿಂದ ವಿಶ್ವಾಸ ಮತಯಾಚನೆ ಮುಂದೂಡಿದ್ರೆ ಒಳ್ಳೇದಾಗುತ್ತದೆ ಎಂಬ ಭಾವನೆಯಿಂದ ಸಾಕಷ್ಟು ಕಸರತ್ತು ಮಾಡಿದರು. ಆದರೆ ಅದು ವಿಫಲವಾ ಯಿತು. ರೇವಣ್ಣ ಅವರ ನಿಂಬೆಹಣ್ಣಿಗೆ ತಕ್ಕ ಉತ್ತರ ಸಿಕ್ಕಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯಕ್ಕೆ, ಯಡಿಯೂರಪ್ಪ ಹಾಗೂ ದೇಶಕ್ಕೆ ಮೋದಿ ಅಗತ್ಯವಾಗಿದೆ. ಅವರಿಗೆ ಒಳ್ಳೆದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸುಭಿಕ್ಷವಾಗಿ ಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ನಾನು ಸಂಪುಟಕ್ಕೆ ಸೇರುವುದಿಲ್ಲ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಬಗ್ಗೆ ನಾನು ನ್ಯಾಯಾಲಯದ ಮೊರೆ ಹೋಗಿದ್ದೇನೆ ಮೂರ್ನಾಲ್ಕು ತಿಂಗಳಲ್ಲಿ ನನಗೆ ಜಯ ಸಿಗಲಿದೆ ಎನ್ನುವ ವಿಶ್ವಾಸವಿದೆ. ನಮ್ಮ ಸರ್ಕಾರ ಯಶಸ್ವಿಯಾಗಿ ನಡೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

Translate »