ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ ಸವದಿ
ಮೈಸೂರು

ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಾರಿಗೆ ಸಚಿವ ಲಕ್ಷ್ಮಣ ಸವದಿ

February 19, 2021

ಕಲಬುರಗಿ,ಫೆ.18-ತೈಲ ದರಗಳು ಹೆಚ್ಚಾ ಗಿದ್ದರೂ ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾವ ಬಂದಿದೆ. ಆದರೆ, ಕೊರೊನಾ ಹಾವಳಿ ಹಾಗೂ ನೈಸರ್ಗಿಕ ವಿಕೋಪಗಳಿಂ ದಾಗಿ ಸಾಮಾನ್ಯ ಜನರು ಈಗಾಗಲೇ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥ ದರಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಿದರೆ ಅವರಿಗೆ ಮತ್ತಷ್ಟು ತೊಂದರೆ ಕೊಟ್ಟಂತಾಗುತ್ತದೆ ಎಂದು ತಿಳಿಸಿದರು.

ಕಳೆದ ಬಾರಿಯ ಬಜೆಟ್‍ನಲ್ಲಿ ಸಾರಿಗೆ ಸಂಸ್ಥೆಯ ನಾಲ್ಕೂ ಘಟಕಗಳಿಗೆ ತಲಾ 1 ಸಾವಿರ ಹೊಸ ಬಸ್ ನೀಡುವುದಾಗಿ ಘೋಷಿಸಲಾಗಿತ್ತು. ಬದಲಾದ ಸನ್ನಿವೇಶ ದಲ್ಲಿ ಸರ್ಕಾರ ಆರ್ಥಿಕ ಮುಗ್ಗಟ್ಟಿಗೆ ಸಿಲು ಕಿದ್ದರಿಂದ ಅದು ಈಡೇರಲಿಲ್ಲ. ಈಗಾಗಲೇ ಶೇ.90ರಷ್ಟು ಬಸ್‍ಗಳ ಓಡಾಟ ಆರಂಭ ವಾಗಿದೆ. ಏಪ್ರಿಲ್ ತಿಂಗಳ ಅಂತ್ಯಕ್ಕೆ ಮತ್ತೆ ಮೊದಲಿನ ಸ್ಥಿತಿಗೆ ಬರಬಹುದು. ಹಾಗಾಗಿ, ಈ ಬಾರಿಯ ಬಜೆಟ್‍ನಲ್ಲಿ ಈಶಾನ್ಯ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳು ಹಾಗೂ ಕೆಎಸ್‍ಆರ್‍ಟಿಸಿಗೆ ತಲಾ 1 ಸಾವಿರ ಬಸ್ ನೀಡಲಾಗುವುದು ಎಂದರು. ಹಳೆಯ ಬಸ್ ಗಳನ್ನು ಗುಜರಿಗೆ ಹಾಕುವ ಬದಲು ಸ್ವಲ್ಪ ಸುಧಾರಣೆ ಮಾಡಿ, ಸಾಮಾಜಿಕ ಉದ್ದೇಶ ಗಳಿಗೆ ಬಳಸಿಕೊಳ್ಳುವ ಉಪಾಯ ಮಾಡ ಲಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರ ಗಳಲ್ಲಿ ಈ ಬಸ್‍ಗಳನ್ನೇ ಶೌಚಾಲಯ, ಡೇ ಕೇರ್ ಸೆಂಟರ್, ಹಾಲುಣಿಸುವ ಮಹಿಳೆ ಯರ ಕೇಂದ್ರಗಳಾಗಿ ಪರಿವರ್ತಿಸಲಾಗು ವುದು ಎಂದೂ ಮಾಹಿತಿ ನೀಡಿದರು.

Translate »