ಕುಡಿಯುವ ನೀರು ಪೂರೈಕೆಯತ್ತ ಗಮನಹರಿಸಲು ಸೂಚನೆ
ಕೊಡಗು

ಕುಡಿಯುವ ನೀರು ಪೂರೈಕೆಯತ್ತ ಗಮನಹರಿಸಲು ಸೂಚನೆ

March 23, 2019

ಮಡಿಕೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕುಡಿ ಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಅನ್ಬುಕುಮಾರ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಪ್ರಕೃತಿ ವಿಕೋಪ ಪುನರ್ ವಸತಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗ ಬಾರದು. ಸಾರ್ವಜನಿಕರಿಂದ ದೂರುಗಳು ಕೇಳಿ ಬರಬಾರದು ಎಂದು ತಿಳಿಸಿದರು.

ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಲಾಗುತ್ತಿರುವ ವಸತಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿ ಸಬೇಕು. ಮಳೆಗಾಲ ಆರಂಭವಾಗುವುದ ರೊಳಗೆ ಸಾಧ್ಯವಾದಷ್ಟು ಮನೆ ಹಸ್ತಾಂ ಞತರಕ್ಕೆ ಪ್ರಯತ್ನಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹೇಳಿದರು.

ವ್ಯಾಪಕ ಮಳೆಯಿಂದಾಗಿ ಜಿಲ್ಲೆಯ ಹಲವು ರಸ್ತೆಗಳು ಕುಸಿದಿವೆ. ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. ಹಾಗೆಯೇ ರಸ್ತೆ ಕುಸಿದಿರುವ ಕಡೆ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ಮಳೆಗೆ ಸಮಸ್ಯೆ ಎದುರಾಗ ಬಹುದು ಎಂದು ಎಚ್ಚರಿಸಿದರು.

ಪ್ರಕೃತಿ ವಿಕೋಪದಡಿ ಕೈಗೊಂಡಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಪಂಚಾಯತ್ ರಾಜ್, ಲೋಕೋ ಪಯೋಗಿ, ಪಿಎಂಜಿಎಸ್‍ವೈ ಇತರ ಇಲಾ ಖೆಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣ ಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ಇದು ವರೆಗೆ ಅಂದಾಜು ಪಟ್ಟಿ ಸಲ್ಲಿಸದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮರಗಳು ಬಿದ್ದು ಭೂಮಿ ಯಲ್ಲಿ ಹೂತು ಹೋಗಿವೆ. ಇವುಗಳನ್ನು ಮೇಲೆತ್ತಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ನಿಟ್ಟನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗುವಂತೆ ನಿರ್ದೇಶನ ನೀಡಿದರು.
ಮರ ತೆಗೆದ ನಂತರ ಮರ ಯಾರಿಗೆ ಸೇರಿದ್ದು ಎಂಬುದನ್ನು ತೀರ್ಮಾನಿಸೋಣ, ಸದ್ಯ ಭೂಮಿಯಲ್ಲಿ ಹೂತು ಹೋಗಿರುವ ಮರಗಳನ್ನು ಹೊರತೆಗೆಯಬೇಕು. ಇಲ್ಲದಿದ್ದಲ್ಲಿ ಮುಂದಿನ ಮಳೆಗಾಲಕ್ಕೆ ತೊಂದರೆಯಾಗಲಿದೆ ಎಂದರು.

ಮತ್ತೆ ಮಳೆ ಆರಂಭವಾಗುವುದರಿಂದ ಮರ ಮತ್ತೊಂದು ಜಮೀನಿಗೆ ಹೋಗು ತ್ತದೆ. ಆದ್ದರಿಂದ ಮಳೆ ನೀರು ಸರಾಗವಾಗಿ ಹೋಗುವಂತಾಗಲು ಹೂತಿರುವ ಮರ ತೆಗೆ ಯುವಂತೆ ಅವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಮನೆಗಳ ನಿರ್ಮಾಣ ಕಾಮ ಗಾರಿಯು ಮಾದಾಪುರ, ಕರ್ಣಂಗೇರಿ, ಮದೆನಾಡುಗಳಲ್ಲಿ ನಡೆಯುತ್ತಿವೆ. ವಸತಿ ಪ್ರದೇಶದಲ್ಲಿ ಕುಡಿಯುವ ನೀರು, ಚರಂಡಿ, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯವನ್ನು ಕಲ್ಪಿಸಬೇಕಿದೆ. ಪ್ರಕೃತಿ ವಿಕೋ ಪಕ್ಕೆ ಸಂಬಂಧಿಸಿದಂತೆ ಮನೆಗಳ ನಿರ್ಮಾಣ, ಪರಿಹಾರ ವಿತರಣೆ ಮತ್ತಿತರ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು, ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಪಂಚಾಯತ್ ರಾಜ್ ಎಂಜಿನಿಯ ರಿಂಗ್ ವಿಭಾಗದ ಕಾಮಗಾರಿಗಳನ್ನು ಕೈಗೊ ಳ್ಳಗಿದೆ ಎಂದು ಅವರು ತಿಳಿಸಿದರು.

ಇನ್‍ಫೋಸಿಸ್ ವತಿಯಿಂದ ಏಪ್ರಿಲ್ ಮೊದಲ ವಾರದಲ್ಲಿ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು ಎಂದು ಇನ್‍ಫೋಸಿಸ್ ಪ್ರತಿನಿಧಿಯೊಬ್ಬರು ಮಾಹಿತಿ ನೀಡಿದರು. ಉಪ ವಿಭಾಗಾಧಿ ಕಾರಿ ಟಿ.ಜವರೇಗೌಡ ಅವರು ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ 177 ಕುಟುಂಬಗಳ ಬ್ಯಾಂಕ್ ಖಾತೆ, ಐಎಫ್ ಎಸ್‍ಸಿ ಕೋಡ್ ಸಮರ್ಪಕವಾಗಿರಲಿಲ್ಲ, ಸದ್ಯ ಈಗ 177 ಸಂತ್ರಸ್ತ ಕುಟುಂಬಗಳ ಬ್ಯಾಂಕುಗಳ ಖಾತೆ ಹಾಗೂ ಐಎಫ್ ಎಸ್‍ಸಿ ಕೋಡ್ ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜು ನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ರೇವಣ್ಣವರ್, ಕೃಷಿ ಇಲಾ ಖೆಯ ಉಪ ನಿರ್ದೇಶಕ ರಾಜು, ಐಟಿ ಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಸಿದ್ದೇಶ್ ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Translate »