ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸಲು ಸೂಚನೆ
ಕೊಡಗು

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸಲು ಸೂಚನೆ

August 13, 2022

ಮಡಿಕೇರಿ,ಆ.12- ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕೂಡಲೇ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸ ಬೇಕು ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರಿಗೆ ಸೂಚಿಸಿದ್ದಾರೆ.

ವಿಡಿಯೋ ಸಂವಾದದ ಮೂಲಕ ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಡಾ.ಎನ್.ವಿ.ಪ್ರಸಾದ್, ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಅಂದಾಜು ಪಟ್ಟಿ ಸಲ್ಲಿಸಬೇಕು. ಜಿಲ್ಲೆಯ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಜೊತೆ ಮಾತನಾಡಿ, ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ ನೀಡಿ, ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣ ಕಾಮಗಾರಿಯಲ್ಲಿ ಪ್ರಮುಖವಾಗಿ ಲ್ಯಾಟರೈಟ್ ಗೋಡೆಗಳಿಗೆ ಪಾಲಿಷಿಂಗ್ ಆಗಬೇಕಿದ್ದು, ಕಟ್ಟಡದ ಮುಂಭಾಗ ಗೇಟ್ ಮತ್ತು ಸುತ್ತು ಗೋಡೆ ನಿರ್ಮಿಸಬೇಕಿದೆ. ಮೆಟ್ಟಿಲುಗಳಿಗೆ ರೇಲಿಂಗ್ಸ್ ಮತ್ತು ಪ್ಲೋರಿಂಗ್ ಮಾಡ ಬೇಕಿದೆ. ರಂಗಮಂದಿರಕ್ಕೆ ಮೇಲ್ಛಾವಣಿ ಅಳವಡಿಕೆ ಹಾಗೂ ಇತರ ಕೆಲಸಗಳು ಬಾಕಿ ಇದೆ ಎಂದು ಉಳಿಕೆ ಕಾಮಗಾರಿಗಳ ವಿವರ ನೀಡಿದ್ದಾರೆ.
ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣ ಸಂಬಂಧ 330.45 ಲಕ್ಷ ರೂ.ಗಳ ಕಾಮಗಾರಿಗೆ ಅನುಮೋದನೆ ದೊರೆತಿದೆ. ಐನ್‍ಮನೆ, ಬಯಲು ರಂಗಮಂದಿರ, ವಾಟರ್ ಟ್ಯಾಂಕ್, ತಡೆಗೋಡೆ ಮತ್ತು ಸಂಪರ್ಕ ಮೆಟ್ಟಿಲುಗಳು, ವಿದ್ಯುತ್ ಸಂಪರ್ಕ ಮತ್ತಿತರ ಕಾಮಗಾರಿಗಳು ಪೂರ್ಣ ಗೊಂಡಿದೆ. ಈಗಾಗಲೇ 282.50 ಲಕ್ಷ ರೂ. ಬಿಡುಗಡೆಯಾಗಿದ್ದು, 47.95 ಲಕ್ಷ ರೂ. ಬಿಡು ಗಡೆಗೆ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ಸಂಬಂಧಿಸಿದಂತೆ 10 ದಿನದಲ್ಲಿ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸಲಾಗುವುದು ಎಂದು ಡಿಸಿ ಅವರು, ಪ್ರವಾಸೋದ್ಯಮ ಡಾ. ಪ್ರಸಾದ್ ಅವರಿಗೆ ತಿಳಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ರತಿ ವಿನಯ್ ಜಾ ಅವರು ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಮಡಿಕೇರಿಯಲ್ಲಿ ಕೊಡವ ಪಾರಂಪರಿಕ ಕೇಂದ್ರ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಕಾಮಗಾರಿ ಪೂರ್ಣ ಗೊಳಿಸಲು ಮುಂದಾಗಬೇಕು ಎಂದು ಕೋರಿದ್ದಾರೆ. ಕೊಡವ ಹೆರಿಟೇಜ್ ಕೇಂದ್ರ ಮುಂದಿನ ಪೀಳಿಗೆಗೆ ಕೊಡವ ಸಂಸ್ಕøತಿ ಪರಿಚಯಿಸುವಲ್ಲಿ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕೊಡವ ಪಾರಂಪರಿಕ ಕೇಂದ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯನ್ನು ನೇಮಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾ ಗಿದೆ. ಸಮಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷರಾಗಿ, ಜಿಲ್ಲೆಯ ಜನಪ್ರತಿ ನಿಧಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

Translate »