ಮೈಸೂರು ತಾಲೂಕಿನ ವಿವಿಧ ಗ್ರಾಮಗಳ  ಸೋಂಕಿತರ ಮನೆಗಳಿಗೆ ಭೇಟಿ ನೀಡಿದ ಸಿಇಓ
ಮೈಸೂರು

ಮೈಸೂರು ತಾಲೂಕಿನ ವಿವಿಧ ಗ್ರಾಮಗಳ ಸೋಂಕಿತರ ಮನೆಗಳಿಗೆ ಭೇಟಿ ನೀಡಿದ ಸಿಇಓ

May 28, 2021

ಮೈಸೂರು, ಮೇ 27-ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ತಾಲೂಕಿನ ಕೆಲ ಗ್ರಾಪಂಗಳಿಗೆ ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಾಹಣಾ ಧಿಕಾರಿ ಎ.ಎಂ.ಯೋಗೀಶ್, ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕಿನ ನಾಗವಾಲ, ಧನಗಳ್ಳಿ, ದೊಡ್ಡ ಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಾಗವಾಲ ಗ್ರಾಪಂನ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ದರು. ಜತೆಗೆ ಆಶಾ ಕಾರ್ಯಕರ್ತೆಯ ರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಮನೆ ಮನೆ ಸರ್ವೆ ಸಮೀಕ್ಷೆ ಕಾರ್ಯ ಅಪೂರ್ಣಗೊಂಡಿದ್ದು, ಅದನ್ನು ಪೂರ್ಣ ಗೊಳಿಸಲು ಸೂಚಿಸಿದರು. ನರೇಗಾ ಯೋಜನೆಯಡಿ ನಡೆಯುತ್ತಿರುವ ಕಲ್ಯಾಣಿ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ವೀಕ್ಷಿಸಿ ದರು. ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕಾರ್ಯ ಪಡೆ, ಸೋಂಕಿತರು ಮತ್ತು ಮಹಾತ್ಮ-ನರೇಗಾ ಯೋಜನೆಯಡಿ ಕಾಮಗಾರಿ ಪ್ರಗತಿ ಪರಿಶೀಲನೆ, ಅಂತರ್ಜಲ ಚೇತನ ಯೋಜನೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಹೋಮ್ ಐಸೋಲೇಷನಲ್ಲಿರುವವರನ್ನು ನೋಡಿ ಕೊಳ್ಳುವುದು ಗ್ರಾಪಂ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜವಬ್ದಾರಿಯಾಗಿದೆ ಎಂದು ತಿಳಿಸಿದರು.

ಧನಗಳ್ಳಿ ಗ್ರಾಪಂಗೆ ಭೇಟಿ ನೀಡಿ ಪರಿ ಶೀಲನೆ ನಡೆಸಿ ಮಹಾತ್ಮ ಗಾಂಧಿ-ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದರು. ಕೋವಿಡ್‍ಗೆ ಸಂಬಂಧಿಸಿದಂತೆ ಅಂಕಿ ಅಂಶ ಮಾಹಿತಿ ಪಡೆದುಕೊಂಡರು.

Translate »