ನ.11ರಂದು ಪ್ರಧಾನಿ ಮೋದಿ ಅವರಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ
News

ನ.11ರಂದು ಪ್ರಧಾನಿ ಮೋದಿ ಅವರಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ

October 20, 2022

ಬೆಂಗಳೂರು ಅ.19(ಕೆಎಂಶಿ)-ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ನ.11ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಅ.21ರಿಂದ ನ.7ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯ ಲಿದೆ. ಇದಕ್ಕೆ ಸಿದ್ಧವಾಗಿರುವ 20 ‘ನಾಡಪ್ರಭು ಕೆಂಪೇ ಗೌಡ ರಥ’ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದರು.

ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ, ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತ ದೊಂದಿಗೆ ಬರಮಾಡಿಕೊಳ್ಳಲಾಗುವುದು ಎಂದರು.

ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯ ಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾ ಗುವುದು. ಪ್ರತಿಯೊಂದು ರಥದ ಮಾರ್ಗನಕ್ಷೆ ಯನ್ನೂ ಸಿದ್ಧಪಡಿಸಲಾ ಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು. ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿ ರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್ ಪಾರ್ಕ್‍ನಲ್ಲಿ ಬಳಸಿಕೊಳ್ಳಲಾಗುವುದು. ಇಡೀ ಕಾರ್ಯ ಕ್ರಮ ಮತ್ತು ಅಭಿಯಾನಗಳು ಪಕ್ಷಾತೀತವಾದ ಕಾರ್ಯ ಕ್ರಮವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆ ಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷ ಗಳಿಂದ ಇತ್ತು ಎಂದು ಅವರು ನುಡಿದರು. ಅಭಿ ಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿ ಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡ ಲಾಗಿದೆ. ಇದಕ್ಕೆ ಜಿಪಂ ಸಿಇಒಗಳು ನೋಡಲ್ ಅಧಿಕಾರಿ ಗಳಾಗಿರುತ್ತಾರೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿ ಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡ ಲಾಗಿದೆ. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣ ದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನು ಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯ ದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರ ವಾಗಲಿದೆ ಎಂದು ಅವರು ಹೇಳಿದರು.

Translate »