ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ

ಮಡಿಕೇರಿ, ಆ.21- ಜಿಲ್ಲೆಯ ಹಾಡಿ ಗಳಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಕುಟುಂಬಗಳು ಶಿಕ್ಷಣದಿಂದ ವಂಚಿತರಾ ಗಿದ್ದು, ಬುಡಕಟ್ಟು ಆದಿವಾಸಿ ಮಕ್ಕಳು ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಎನ್.ಸುಬ್ರಹ್ಮಣ್ಯ ಕರೆ ನೀಡಿದ್ದಾರೆ.
ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಅರಿವು, ಬಾಲ್ಯವಿವಾಹ, ಬಾಲಕಾರ್ಮಿಕ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರವು ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಬೇಕು ಎಂಬ ಉದ್ದೇಶ ದಿಂದ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆ ಗಳು, ಶಿಷ್ಯವೇತನ, ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹ ಧನ, ಜೊತೆಗೆ ಉಚಿತ ಶಿಕ್ಷಣ ಹೀಗೆ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಪಡೆದಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮತ್ತಿತರವನ್ನು ತಡೆಯಲು ಸಾಧ್ಯ, ಅನಕ್ಷರತೆಯಿಂದಾ ಗಿಯೇ ಹಲವು ಸಮಸ್ಯೆಗಳು ಸಮಾಜ ದಲ್ಲಿ ಉದ್ಭವಿಸುತ್ತವೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಕಾನೂ ನಿನ ಅರಿವು ಪಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋ ಗದ ಸದಸ್ಯರಾದ ಪರಶುರಾಮ ಅವರು ಮಾತನಾಡಿ, ಆದಿವಾಸಿ ಬುಡಕಟ್ಟು ಜನಾಂ ಗವು ಇಂದಿನ ಆಧುನಿಕ ಯುಗದಲ್ಲಿ ಕಾನೂನು ಹಾಗೂ ಸಾಕ್ಷರತೆ ಕೊರತೆಯಿಂದಾಗಿ ತಮ್ಮ ಹಕ್ಕುಗಳನ್ನು ಪಡೆಯುವಲ್ಲಿ ಹಿಂದೆ ಉಳಿದಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರವಿಂದ ಬಾಬು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾದ ಎ.ಎಂ.ಸೂರಜ್, ತಾಲೂಕು ಗಿರಿಜನ ಅಧಿಕಾರಿ ಬಾಲಕೃಷ್ಣ ರೈ, ಸಿಡಿಪಿಒ ಅಣ್ಣಯ್ಯ, ಶ್ಯಾಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಇತರರು ಇದ್ದರು.