ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ `ಪದ್ಮಶ್ರೀ’ ಪ್ರಶಸ್ತಿ ಪ್ರದಾನ
ಮೈಸೂರು

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ `ಪದ್ಮಶ್ರೀ’ ಪ್ರಶಸ್ತಿ ಪ್ರದಾನ

April 30, 2019

ಮೈಸೂರು: ಖ್ಯಾತ ಸರೋದ್‍ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂದಿರುವ 2019ನೇ ಸಾಲಿನ `ಪದ್ಮಶ್ರೀ’ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು.

ನವದೆಹಲಿಯಲ್ಲಿ 2019ರ ಮಾ.16 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರ ಪತಿ ಅವರು ಎಲ್ಲಾ ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಗಳನ್ನು ಪ್ರದಾನ ಮಾಡಿದ್ದರು. ಅಂದು ಶ್ರೀ ರಾಜೀವ್ ತಾರಾನಾಥ್ ಅವರು ಕಾರ ಣಾಂತರಗಳಿಂದ ಆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಸೋಮವಾರ ಶ್ರೀ ರಾಜೀವ್ ತಾರಾ ನಾಥ್ ಅವರ ಕುವೆಂಪುನಗರದ ಸ್ವಗೃಹ ದಲ್ಲೇ ಪ್ರದಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ್ ಅವರು ಪ್ರಶಸ್ತಿ ಪ್ರದಾನ ಮಾಡಿ, ಗೌರವ ಸಲ್ಲಿಸಿದರು.

Translate »