ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ
ಮೈಸೂರು

ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ

June 5, 2019

ಬೆಂಗಳೂರು: ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಏಕೈಕ ಸ್ಥಾನ ಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆ ಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರು ವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ. ಜೊತೆಗೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರಿಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. “ಪಕ್ಷದ ಬಗ್ಗೆ ಅರಿವಿರದ ಹೊಸಬರಿಗೆ ಮಣೆ ಹಾಕಿರುವುದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣವಾಗಿದೆ. ಸಚಿವರು, ನಾಯಕರಲ್ಲಿದ್ದ ಸಂಘಟನಾ ಕೊರತೆ, ಕಾರ್ಯಕರ್ತರು-ನಾಯಕರ ನಡುವಿನ ಅಂತರಗಳು ಚುನಾವಣೆಯಲ್ಲಿ ಕಾಂಗ್ರೆಸ್ ಈ ರೀತಿ ಹೀನಾಯ ಸೋಲು ಕಾಣುವಂತೆ ಮಾಡಿದೆ ಎಂದು ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿಯವರ ಸರಣಿ ಟ್ವಿಟ್: ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಬಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ ಕಾರಣವಾಗಿದೆ.

“ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು. ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ. ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸ ಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆ ಯುವುದು ಕಷ್ಟ ಸಾಧ್ಯವಾದೀತು. ಪಕ್ಷದ ಪರ ಚುನಾವಣಾ ಫಲಿತಾಂಶದಲ್ಲಿ ಎಡವಿದ ಸಚಿವರಿಗೆ ಪಕ್ಷ ಸಂಘಟನಾ ಜವಾಬ್ದಾರಿ ನೀಡುವುದರ ಜೊತೆಗೆ ಹಿರಿಯರಿಗೆ ಸರ್ಕಾರದಲ್ಲಿ ಸ್ಥಾನಮಾನ ನೀಡಿ, ಪಕ್ಷದ ಆಂತರಿಕ ಅಸಮತೋಲನವನ್ನು ಸರಿಪಡಿಸುವ ಕಾರ್ಯ ವನ್ನು, ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕಾಗಿದೆ.

Translate »