ಮತದಾನಕ್ಕೆ 48 ಗಂಟೆ ಇರುವಾಗ ಜಾಹೀರಾತು ಪ್ರಕಟಿಸಲು ಅನುಮತಿ ಕಡ್ಡಾಯ
ಮೈಸೂರು

ಮತದಾನಕ್ಕೆ 48 ಗಂಟೆ ಇರುವಾಗ ಜಾಹೀರಾತು ಪ್ರಕಟಿಸಲು ಅನುಮತಿ ಕಡ್ಡಾಯ

March 17, 2019

ಮೈಸೂರು: ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿ ಹಾಗೂ ಜಾಹೀ ರಾತುಗಳ ಬಗ್ಗೆ ನಿಗಾ ವಹಿಸಲು ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ರಚಿಸಲಾಗಿರುತ್ತದೆ. ಸಮಿತಿಯು ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮಾಧ್ಯಮದವರಿಗೆ ಚುನಾವಣಾ ನೀತಿ ನಿಯಮ ಕುರಿತು ಸಲಹೆ ಸೂಚನೆ ಹಾಗೂ ವಿವಿ ಪ್ಯಾಟ್ ಬಳಕೆ ಅದರಿಂದ ಯಾವುದೇ ರೀತಿಯಲ್ಲಿ ವ್ಯತ್ಯಾಸ ಕಂಡು ಬರುವುದಿಲ್ಲ ಎಂಬುದನ್ನು ಅರಿವು ಮೂಡಿ ಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣಾ ಜಾಹೀರಾತುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡಲು ಮಾಧ್ಯಮ ಪ್ರಮಾಣೀಕರಣ ಸಮಿತಿಯಿಂದ ಅನುಮೋದನೆ ಪಡೆಯುವುದು ಕಡ್ಡಾಯ ವಾಗಿರುತ್ತದೆ. ಅನುಮೋದನೆಗಾಗಿ ಅರ್ಜಿ ಯನ್ನು ಅಭ್ಯರ್ಥಿಗಳು ಸಲ್ಲಿಸಬೇಕಿರುತ್ತದೆ. ವಿದ್ಯುನ್ಮಾನ ಮಾಧ್ಯಮದವರು ತಮ್ಮ ವಾಹಿನಿಗಳಲ್ಲಿ ಜಾಹೀರಾತು ಪ್ರಸಾರ ಮಾಡುವಾಗ ಅನುಮೋದನೆ ಪಡೆದಿರುವ ಪತ್ರವನ್ನು ಪಡೆದುಕೊಳ್ಳಿ ಎಂದರು.

ಮುದ್ರಣ ಮಾಧ್ಯಮದದಲ್ಲಿ ಜಾಹೀ ರಾತು ಪ್ರಕಟಿಸಲು ಅನುಮೋದನೆಯ ಅವಶ್ಯಕತೆ ಇಲ್ಲ. ಆದರೆ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಮುಂಚಿತ ವಾಗಿ ಪ್ರಕಟಿಸುವ ಜಾಹೀರಾತಿಗೆ ಅನು ಮೋದನೆ ಕಡ್ಡಾಯವಾಗಿರುತ್ತದೆ. ಏಪ್ರಿಲ್ 17 ಹಾಗೂ 18 ರಂದು ಪ್ರಕಟಿಸುವ ಜಾಹೀರಾತುಗಳಿಗೆ ಅನುಮೋದನೆ ಕಡ್ಡಾಯವಾಗಿರುತ್ತದೆ ಎಂದರು.

ಚುನಾವಣಾ ಸಮಯದಲ್ಲಿ ಹಲವಾರು ಸುಳ್ಳು ಸುದ್ದಿಗಳು ಬರುತ್ತವೆ. ಅಂತಹ ಸುದ್ದಿ ಯನ್ನು ಬಿತ್ತರಿಸಬೇಡಿ ಹಾಗೂ ಒಂದೇ ಅಭ್ಯರ್ಥಿ, ಪಕ್ಷ ಕುರಿತ ಸುದ್ದಿಯನ್ನು ವರದಿ ಮಾಡುವಾಗ ಎಚ್ಚರಿಕೆಯಿಂದ ಕಾರ್ಯನಿರ್ವ ಹಿಸಿ ಎಂದು ಮನವಿ ಮಾಡಿದರು.
ಮತ ಚಲಾಯಿಸುವ ಬ್ಯಾಲೆಟ್ ಯುನಿಟ್, ಮತ ಸಂಗ್ರಹಣೆಯ ಕಂಟ್ರೋಲ್ ಯುನಿಟ್ ಹಾಗೂ ಮತ ಚಲಾವಣೆ ನಂತರ ಮತ ಹಾಕಿ ರುವ ಪ್ರಿಂಟ್ ಕಾಣಲು ವಿವಿಪ್ಯಾಟ್ ಯುನಿಟ್ ಈ ಮೂರು ಯುನಿಟ್ ಮತದಾನ ಪ್ರಕ್ರಿಯೆಯ ಪ್ರಮುಖ ಸಾಧನಗಳಾಗಿವೆ ಎಂದು ಮಾದರಿ ಮೂಲಕ ಮತದಾನ ಪ್ರಕ್ರಿಯೆ ತೋರಿಸಿಕೊಟ್ಟರು. ಬ್ಯಾಲೆಟ್ ಯುನಿಟ್‍ಗೆ ಅಭ್ಯರ್ಥಿ ಹೆಸರು ಹಾಗೂ ಅವರ ಚಿಹ್ನೆ ಅಳವಡಿಸಬಹುದು ಹೊರತು ಬೇರೆ ಏನನ್ನೂ ಸಹಾ ಅಳವಡಿಕೆ ಮಾಡಲು ಸಾಧ್ಯವಿಲ್ಲ. ಯಾರೂ ಮತಯಂತ್ರದ ಮೇಲೆ ಅನುಮಾನ ಪಡುವುದು ಬೇಡ ಎಂದು ಹೇಳಿದರು.

ಸಾರ್ವಜನಿಕರಿಗೆ ಮತ ಚಲಾಯಿಸುವ ಕುರಿತು ಅರಿವು ಮೂಡಿಸಲು ಈಗಾಗಲೇ 191 ತಂಡಗಳ ರಚನೆ ಮಾಡಿ ಹಲವಾರು ಕಾಲೇಜು ಗಳಲ್ಲಿ, ಗ್ರಾ.ಪಂ.ಗಳಲ್ಲಿ ಹಾಗೂ ಜನ ಸೇರುವ ಕಡೆ ಮಾದರಿ ಮೂಲಕ ಜನತೆಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ರೈಲ್ವೆ ನಿಲ್ದಾಣ, ಮಾರುಕಟ್ಟೆ, ಇಂತಹ ಸ್ಥಳಗಳಲ್ಲಿ ಕೂಡ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ರಾಜು, ಮಾಸ್ಟರ್ ಟ್ರೈನರ್ ನಾಗೇಶ್ ಹಾಗೂ ವಿವಿಧ ಮಾಧ್ಯಮ ಮುಖ್ಯಸ್ಥರು ಭಾಗವಹಿಸಿದ್ದರು.

Translate »