ಪೆರುಂಬಾಡಿ-ಮಾಕುಟ್ಟ ರಸ್ತೆ ಪರಿಶೀಲನೆ
ಕೊಡಗು

ಪೆರುಂಬಾಡಿ-ಮಾಕುಟ್ಟ ರಸ್ತೆ ಪರಿಶೀಲನೆ

June 19, 2018

ವಿರಾಜಪೇಟೆ:  ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದ ಹಾನಿಯಾಗಿ, ಸಾರಿಗೆ ಸಂಪರ್ಕ ಕಡಿತಗೊಂಡಿ ರುವ ಅಂತರರಾಜ್ಯ ಹೆದ್ದಾರಿ ಪೆರುಂಬಾಡಿ-ಮಾಕುಟ್ಟ ರಸ್ತೆಗೆ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಸೋಮ ವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಅತಿವೃಷ್ಟಿಯಿಂದಾಗಿ ಪೆರುಂಬಾಡಿ-ಮಾಕುಟ್ಟ ಮಾರ್ಗದ ರಸ್ತೆಯಲ್ಲಿ ಸುಮಾರು 30 ಕಡೆಗಳಲ್ಲಿ ಬರೆ ಕುಸಿತ ಹಾಗೂ ಮರಗಳು ಉರುಳಿ ದೊಡ್ಡ ಅನಾಹುತವಾಗಿದ್ದು, ಇದನ್ನು ತುರ್ತಾಗಿ ಸರಿಪಡಿಸಲು ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಲಾಗು ವುದು ಎಂದು ಸಚಿವರು ತಿಳಿಸಿದರು. ಈಗಾಗಲೇ ಜಿಲ್ಲಾಡಳಿತಕ್ಕೆ ಪ್ರಕೃತಿ ವಿಕೋಪಕ್ಕಾಗಿ 10 ಕೋಟಿ ರೂ ಬಿಡುಗಡೆ ಮಾಡ ಲಾಗಿದ್ದು, ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಪೆರುಂಬಾಡಿ-ಮಾಕುಟ್ಟ ರಸ್ತೆ ಬದಿ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯುವಂತೆ ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಕೃತಿ ವಿಕೋಪ ಎದುರಿಸಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮರೋಪಾಧಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಲೋಕೋಪಯೋಗಿ ಎಂಜಿನಿ ಯರ್ ವಿನಯ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಿಸ್ತರಾಜ ಅವರು ಮಳೆಯಿಂದ ಉಂಟಾಗಿರುವ ಹಾನಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಇತರರು ಇದ್ದರು.

Translate »