ಆಸ್ತಿ ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಮೈಸೂರು

ಆಸ್ತಿ ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

October 12, 2020

ನವದೆಹಲಿ,ಅ.11-ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರ ಜ್ಞಾನದ ಸ್ವಾಮಿತ್ವ ಯೋಜನೆಯ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ. ಈ ಕಾರ್ಡ್‍ಗಳು ಹಳ್ಳಿಗರ ಮನೆಗಳು ಮತ್ತು ಅವರು ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿಗಳಾಗಲಿವೆ. ಏಪ್ರಿಲ್‍ನಲ್ಲಿ ಆರಂಭಿ ಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭ ವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. ಯೋಜನೆಯಲ್ಲಿ ಉತ್ತರಪ್ರದೇಶದ 346, ಹರಿ ಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44, ಉತ್ತರಾಖಂಡದ 50 ಮತ್ತು ಕರ್ನಾಟಕದ 2 ಗ್ರಾಮಗಳು ಸೇರಿ ಒಟ್ಟು 763 ಗ್ರಾಮಗಳ ಫಲಾನುಭವಿಗಳು ಯೋಜನೆಯ ಲಾಭವನ್ನು ಪಡೆಯಲಿದ್ದಾರೆ. ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಫಲಾನುಭವಿಗಳು ಒಂದೇ ದಿನದಲ್ಲಿ ಪ್ರಾಪರ್ಟಿ ಕಾರ್ಡ್‍ಗಳ ಭೌತಿಕ ಪ್ರತಿಗಳನ್ನು ಸ್ವೀಕರಿಸಲಿ ದ್ದಾರೆ. ಪ್ರಾಪರ್ಟಿ ಕಾರ್ಡ್‍ನ ಅತ್ಯಲ್ಪ ವೆಚ್ಚವನ್ನು ಮರುಪಡೆಯುವ ವ್ಯವಸ್ಥೆಯನ್ನು ಮಹಾರಾಷ್ಟ್ರ ಹೊಂದಿರುವುದರಿಂದ 1 ತಿಂಗಳ ಕಾಲಾವಕಾಶ ತೆಗೆದುಕೊಂಡಿದೆ. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಆಸ್ತಿ ಕಾರ್ಡ್‍ಗಳನ್ನು ವಿತರಿಸುವ ಯೋಜನೆ ಗ್ರಾಮೀಣ ಭಾರತದ ಬದಲಾವಣೆಯ ಐತಿಹಾಸಿಕ ನಡೆಯಾಗಿದ್ದು, ಗ್ರಾಮೀಣ ಭಾಗದ ಚಿತ್ರಣವೇ ಬದಲಾಗಲಿದ್ದು, ಗ್ರಾಮೀಣ ಭಾಗದಲ್ಲಿ ದೊಡ್ಡ ಪರಿವರ್ತನೆಗೆ ಈ ಯೋಜನೆ ಕಾರಣವಾಗಲಿದೆ ಎಂದು ಹೇಳಿದರು.

 

Translate »