ಮೈಸೂರು: ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಭಾನು ವಾರ ನಡೆಯುವ ಗಣರಾಜ್ಯೋ ತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾ ಡಲು ಹಾಗೂ ಸುಗಮ ಸಂಚಾರ ಕ್ಕಾಗಿ ಸಾರ್ವಜನಿಕರು ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತರು ಕೋರಿದ್ದಾರೆ.
- ಜ.26ರಂದು ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿ.ಪಂ ಅಧ್ಯಕ್ಷರು, ಉಪಾ ಧ್ಯಕ್ಷರು, ನಗರಪಾಲಿಕೆ ಸದಸ್ಯರುಗಳು ಬನ್ನಿಮಂಟಪದ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ಇವರ ವಾಹನಗಳಿಗೆ ಮುಖ್ಯ ದ್ವಾರದ ಎಡಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
- ಗೇಟ್ ಜಿ-5ರಲ್ಲಿ ಪೊಲೀಸ್ ಇಲಾಖೆ, ಪತ್ರಿಕಾ ಮಾಧ್ಯಮ, ಇತರೆ ಇಲಾಖೆ ಮತ್ತು ಸಾರ್ವಜನಿಕರ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ಪ್ರವೇಶ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಗೇಟ್ ಜಿ-8ರಲ್ಲಿ ಗಣರಾಜ್ಯೋತ್ಸವದ ಸಾಂಸ್ಕøತಿಕ ಕಾರ್ಯ ಕ್ರಮ ಹಾಗೂ ಪೆರೇಡ್ನಲ್ಲಿ ಭಾಗವಹಿಸುವವರಿಗೆ, ಶಾಲಾ-ಕಾಲೇಜು ವಾಹನಗಳ ಪ್ರವೇಶ ಮತ್ತು ಪಾರ್ಕಿಂಗ್ ವ್ಯವಸ್ಥೆ.
- ಗೇಟ್ ಜಿ-11ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. * ಸುರಕ್ಷತೆಯ ದೃಷ್ಟಿಯಿಂದ ಯಾವುದೇ ರೀತಿಯ ಆಯುಧ ಗಳು, ಗಾಜಿನ ನೀರಿನ ಬಾಟಲಿ ಮತ್ತು ದೊಡ್ಡ ಬ್ಯಾಗ್ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
- ಲೋಹಶೋಧಕ ಯಂತ್ರ ಗಳನ್ನು ಅಳವಡಿಸಿದ್ದು, ಸಾರ್ವಜನಿಕರು ಈ ಯಂತ್ರದ ಮೂಲಕ ತಪಾಸಣೆಗೆ ಒಳಪಟ್ಟು ನಂತರ ಮೈದಾನದೊಳಕ್ಕೆ ತೆರಳಬೇಕು
- ಕವಾಯಿತು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಾರ್ವ ಜನಿಕರು ಪ್ರವೇಶಿಸಬಾರದು. ನಿಗದಿಪಡಿಸಿದ ಸ್ಥಳದಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಬೇಕು. ಕಾರ್ಯಕ್ರಮ ಪ್ರಾರಂಭವಾದ ನಂತರ ಪದೇ ಪದೇ ಸ್ಥಳ ಬದಲಾವಣೆ ಮಾಡಬಾರದು.
- ನಿಗದಿತ ಪ್ರವೇಶ ದ್ವಾರ ಹೊರತುಪಡಿಸಿ, ಬೇರೆ ಕಡೆಗಳಿಂದ ಸಾರ್ವಜನಿಕರು ಪ್ರವೇಶಿಸಬಾರದು. ಸಾರ್ವಜನಿಕರು ತಮ್ಮ ವಾಹನಗಳನ್ನು ಪೊಲೀಸರು ನಿಗದಿಪಡಿಸಿದ ಸ್ಥಳದಲ್ಲೇ ನಿಲುಗಡೆ ಮಾಡಬೇಕು.
- ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿ ನಿಲ್ಲಿಸಿದ ವಾಹನ ಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಸಾರ್ವಜನಿಕ ಸ್ಥಳಗಳಾದ ಮಾಲ್ಗಳು, ಸಿನಿಮಾ ಮಂದಿರ ಗಳು, ಮಾರುಕಟ್ಟೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಏರ್ಪೋರ್ಟ್, ಪ್ರಾರ್ಥನಾ ಸ್ಥಳಗಳು, ಪ್ರವಾಸಿ ಸ್ಥಳಗಳು ಹಾಗೂ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ ಮಾಲೀಕರು-ವ್ಯವಸ್ಥಾಪಕರು ಸೂಕ್ತ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನೇಮಿಸಬೇಕು.
- ಹೋಟೆಲ್, ವಸತಿಗೃಹ, ಹೋಂ ಸ್ಟೇಗಳ ಮಾಲೀಕರು ಪ್ರವಾಸಿಗರಿಗೆ ಮತ್ತು ಇತರರಿಗೆ ಕೊಠಡಿ ಗಳನ್ನು ನೀಡುವಾಗ ಅವರ ಬಗ್ಗೆ ಹಾಗೂ ಅವರು ತಂದಿರುವ ಲಗ್ಗೇಜ್ಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ, ಪೂರ್ಣ ವಿಳಾಸದ ಮಾಹಿತಿ ಪಡೆದು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು, ವಾಹನಗಳು, ವಸ್ತುಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂ.ಸಂ. 0821-2418100, 2418339, 2418139ಗೆ ಕರೆ ಮಾಡಿ ತಿಳಿಸಬೇಕು. ಮಾಹಿತಿ ನೀಡಿ ದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತ: ಜಿಲ್ಲಾಡಳಿತದ ವತಿಯಿಂದ ಜ.26ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸು ವರು. ಮೇಯರ್ ತಸ್ನೀಂ, ಜಿಪಂ ಅಧ್ಯಕ್ಷೆ ಪರಿಮಳಾ, ಡಿಸಿ ಅಭಿ ರಾಮ್ ಜಿ.ಶಂಕರ್ ಸೇರಿದಂತೆ ಮತ್ತಿತರರು ಭಾಗವಹಿಸುವರು.