ನಾಗಮಂಗಲ, ಡಿ.17- ತಾಲೂಕಿನ ಕಾರಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಡಿ 4.05 ಕೋಟಿ ರೂ. ವೆಚ್ಚದ ಚರಂಡಿ, 5 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕÀರು, ಮೈಲಾರಪಟ್ಟಣ ರಸ್ತೆಯಿಂದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಗೆ ಸೇರುವ ದೊಡ್ಡಜಟಕ ಗ್ರಾಮದ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಅತ್ಯವಶ್ಯಕವಾಗಿತ್ತು. ಅಲ್ಲದೇ ಸ್ಥಳೀಯರ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು ಗ್ರಾಮ ವ್ಯಾಪ್ತಿಯಲ್ಲಿ ಸುಸಜ್ಜಿತ ಒಳಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಮುಖಂಡರಾದ ನಾಗರಾಜು, ಪುಟ್ಟಸ್ವಾಮಿ, ವಿನೋದ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.