ಅಂಚೆ ಅದಾಲತ್

ಮೈಸೂರು: ಸಮಗ್ರ ಅಂಚೆ ಸೇವೆಗಳ ದೂರು ಮತ್ತು ಕುಂದುಕೊರತೆ ನಿವಾರಿಸಲು ಹಾಗೂ ಆಂಚೆ ಸೇವೆ ಸುಧಾರಣೆಗಾಗಿ ಸಲಹೆ ಸ್ವಾಗತಿಸಲು ಜೂ. 14 ರಂದು ಬೆಳಿಗ್ಗೆ 11 ಗಂಟೆಗೆ ಯಾದವಗಿರಿ ಅಂಚೆ ಕಛೇರಿಯ ಹಿರಿಯ ಅಧೀಕ್ಷಕರ ಕಾರ್ಯಾಲಯದಲ್ಲಿ “ಡಾಕ್ ಅದಾಲತ್” ಆಯೋಜಿಸಿದೆ. ದೂರುಗಳನ್ನು ಮೈಸೂರು ವಿಭಾಗದ ಅಂಚೆ ಸೇವೆಗಳ ಹಿರಿಯ ಅಧೀಕ್ಷಕರ ಕಾರ್ಯಾಲಯಕ್ಕೆ ಸಲ್ಲಿಸುವುದು.