ನವದೆಹಲಿ, ಜು. 1- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸೋಮವಾರ ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲಾತಿ ತಿದ್ದು ಪಡಿ ಮಸೂದೆ ಮಂಡಿಸಿದ್ಧಾರೆ. ಮಂಡನೆ ವೇಳೆ ಜಮ್ಮು-ಕಾಶ್ಮೀರದ ಇತಿಹಾಸ ಕೆದಕಿದ ಅಮಿತ್ ಶಾ, ಕಾಂಗ್ರೆಸ್ಸಿಗೆ ತೀವ್ರ ತರಾಟೆ ತೆಗೆದುಕೊಂಡರು. ಅಲ್ಲದೇ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಆರು ತಿಂಗಳ ವರೆಗೂ ವಿಸ್ತರಿಸಲು ಪ್ರಸ್ತಾವ ಸಲ್ಲಿಸಿ ದ್ದೇನೆ ಎಂದು ರಾಜ್ಯಸಭೆಗೆ ತಿಳಿಸಿದರು.
ಕಳೆದ 3 ದಿನಗಳ ಹಿಂದೆ ಲೋಕ ಸಭೆಯಲ್ಲಿ ಕೂಡ ಜಮ್ಮು-ಕಾಶ್ಮೀರ ಮೀಸಲಾತಿ ತಿದ್ದಪಡಿ ಮಸೂದೆ ಯನ್ನು ಅಮಿತ್ ಶಾ ಮಂಡಿಸಿದ್ದರು. ಈ ವೇಳೆ ಮಾತಾಡಿದ ಅವರು, ಈ ಮೀಸಲಾತಿ ಯಾರನ್ನೂ ಕೂಡ ಮೆಚ್ಚಿ ಸಲು ಅಲ್ಲ. ಬದಲಿಗೆ ನಿರಂತರ ಉಗ್ರರ ದಾಳಿ ಹಾಗೂ ಬಾಂಬ್ ಸ್ಫೋಟಕ್ಕೆ ತತ್ತರಿಸಿ ಹೋಗುತ್ತಿರುವ ಜನ ಮತ್ತು ವಿದ್ಯಾರ್ಥಿಗಳಿಗೆ ಆಶ್ರಯ ನೀಡಲು ಜಾರಿಗೆ ಮಾಡಬೇಕಿದೆ. ಇಂತಹ ಮಸೂದೆಯಿಂದ ಕಥುವಾ, ಸಾಂಬಾ ಮತ್ತು ಜಮ್ಮುವಿನಲ್ಲಿ ವಾಸಿಸುವ 3.5 ಲಕ್ಷ ಜನರಿಗೆ ಸಹಾಯವಾಗಲಿದೆ. ಸದ್ಯ ಕಾನೂನಿನ ಪ್ರಕಾರ ರಾಜ್ಯದಲ್ಲಿ ಶೇ. 43ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಈ ಪೈಕಿ ಶೇ.3ರಷ್ಟು ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಿಸುವ ಜನ ರಿಗೆ ಲಭ್ಯವಾಗುತ್ತಿದೆ ಎಂದರು.