ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಪ್ರಧಾನಿ ಮೋದಿ ಶಪಥ!
ಮೈಸೂರು

ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಪ್ರಧಾನಿ ಮೋದಿ ಶಪಥ!

April 22, 2019

ಅಹ್ಮದಾಬಾದ್:ಭಯೋತ್ಪಾದನೆ ನಿರ್ಮೂ ಲನೆ ಮಾಡಿಯೇ ತೀರುವುದಾಗಿ ಶಪಥ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಒಂದೋ ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು ಎಂದು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಏ.23ರಂದು 3ನೇ ಹಂತದ ಮತದಾನ ನಡೆಯಲಿದ್ದು, ಗುಜರಾತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಾರ್ವಜನಿಕ ಸಭೆಯನ್ನುದ್ದೇ ಶಿಸಿ ಮಾತನಾಡಿದರು. ನನ್ನ ಪ್ರಧಾನಿ ಹುದ್ದೆ ಉಳಿಯು ತ್ತದೆಯೋ ಇಲ್ಲವೋ. ಆದರೆ ಭಯೋತ್ಪಾದಕರಿರಬೇಕು ಅಥವಾ ನಾನು ಇರಬೇಕು ಎಂಬುದನ್ನು ನಾನು ನಿರ್ಧ ರಿಸಿಯಾಗಿದೆ ಎಂದು ಮೋದಿ ಹೇಳಿದರು.

ವಿಂಗ್ ಕಮಾಂಡರ್ ಅಭಿನಂದನ್ ಅವರು ಪಾಕಿಸ್ತಾನ ದಿಂದ ವಾಪಸ್ ಆದ ಪ್ರಕ್ರಿಯೆಯ ಬಗ್ಗೆಯೂ ಮಾತನಾ ಡಿರುವ ಮೋದಿ, ನಮ್ಮ ಪೈಲಟ್‍ಗೆ ಏನಾದರೂ ಆದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಸಿದ್ದೆವು. ಅಭಿ ನಂದನ್‍ಗೆ ಏನಾದರು ಆದಲ್ಲಿ ಮೋದಿ ನಮಗೆ ಹೀಗೆ ಮಾಡಿದರು ಎಂದು ಇಡೀ ಪ್ರಪಂಚದ ಮುಂದೆ ನೀವು ಹೇಳುತ್ತಲೇ ಇರಬೇಕು ಹಾಗೆ ಮಾಡುತ್ತೇವೆ ಎಂದು ನಾವು ಎಚ್ಚರಿಸಿದ್ದೆವು ಎಂದು ಮೋದಿ ಹೇಳಿದರು.

ಅಭಿನಂದನ್ ಪಾಕ್ ವಶದಲ್ಲಿದ್ದಾಗ ಮೋದಿ 12 ಕ್ಷಿಪಣಿ ಗಳನ್ನು ಸಿದ್ಧಗೊಳಿಸಲಾಗಿತ್ತು. 2ನೇ ದಿನಕ್ಕೇ ಪಾಕಿಸ್ತಾನ ಅಭಿನಂದನ್ ಬಿಡುಗಡೆಯನ್ನು ಘೋಷಿಸಿತ್ತು. ಇಲ್ಲವಾದಲ್ಲಿ ಆ ರಾತ್ರಿ “ರಕ್ತಪಾತದ ರಾತ್ರಿಯಾಗಿರುತ್ತಿತ್ತು” ಎಂದು ಅಮೆ ರಿಕದ ಹಿರಿಯ ಅಧಿಕಾರಿಗಳಲ್ಲೊಬ್ಬರು ಹೇಳಿದ್ದರು. ಇದನ್ನು ಹೇಳಿದ್ದು ಅಮೆರಿಕ, ಈಗ ಈ ಬಗ್ಗೆ ನಾನೇನು ಹೇಳು ವುದಕ್ಕಿಲ್ಲ. ಸಮಯ ಬಂದಾಗ ನಾನು ಈ ಬಗ್ಗೆ ಮಾತ ನಾಡುತ್ತೇನೆ ಎಂದು ಮೋದಿ ಹೇಳಿದ್ದಾರೆ. ಇನ್ನು ಮೋದಿ ಮುಂದೇನು ಮಾಡುತ್ತಾರೆ ಎಂಬ ಬಗ್ಗೆ ಭಯವಾಗುತ್ತಿದೆ ಎಂಬ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆಗೂ ಮೋದಿ ಪ್ರತಿಕ್ರಿಯೆ ನೀಡಿದ್ದು, ಶರದ್ ಪವಾರ್ ಅವರು ಮೋದಿ ಮುಂದೇನು ಮಾಡುತ್ತಾರೆ ಗೊತ್ತಿಲ್ಲ ಎಂದು ಹೇಳುತ್ತಾರೆ. ಅವರಿಗೇ ನಾನೇನು ಮಾಡುತ್ತೇನೆಂಬುದು ಗೊತ್ತಿಲ್ಲ ಎಂದ ಮೇಲೆ ಇಮ್ರಾನ್ ಖಾನ್‍ಗೆ ಹೇಗೆ ತಿಳಿಯುತ್ತದೆ ಎಂದು ಪ್ರಶ್ನಿಸಿದ್ದಾರೆ.

Translate »