ಮೈಸೂರಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿದ್ದರಾಮಯ್ಯರಿಂದ ಪ್ರಗತಿ ಪರಿಶೀಲನೆ
ಮೈಸೂರು

ಮೈಸೂರಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿದ್ದರಾಮಯ್ಯರಿಂದ ಪ್ರಗತಿ ಪರಿಶೀಲನೆ

June 15, 2018

ಮೈಸೂರು:  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಸಿದ್ದರಾಮಯ್ಯ ಅವರು ನಾಳೆ(ಜೂ.15) ಮೈಸೂರಿನಲ್ಲಿ ಆಡಳಿತದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಲಲಿತ ಮಹಲ್ ರಸ್ತೆಯಲ್ಲಿರುವ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕರ ಕಚೇರಿ, ಮಧ್ಯಾಹ್ನ 2 ಗಂಟೆಗೆ ದೊಡ್ಡಕೆರೆ ಮೈದಾನದ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಹಾಗೂ ಮಧ್ಯಾಹ್ನ 3 ಗಂಟೆಗೆ ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆ ಆಯುಕ್ತರ ಕಚೇರಿಗಳಲ್ಲಿ ಪ್ರೊ.ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಾಧಿಕಾರದ ಸದಸ್ಯರಾದ ಪ್ರಭಾಕರ ಪಟೇಲ್, ಅಬು ಅಹಮದ್, ಶ್ರೀಮತಿ ಶಾರದಾ ಸಂಪತ್, ಚಂದ್ರಶೇಖರ ಕದಂಬ ಹಾಗೂ ಶ್ರೀಮತಿ ಸುಜಾತ ಅಕ್ಕಿ ಅವರು ಸಭೆಯಲ್ಲಿ ಭಾಗವಹಿಸುವರು.

Translate »