ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ  ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಮೈಸೂರು

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ

April 9, 2019

ಮೈಸೂರು: ನಗರದ ವಿವಿಧೆಡೆ ಏ.9ರಿಂದ ಏ.20 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಶೋಕಪುರಂ ಠಾಣಾ ವ್ಯಾಪ್ತಿಯ ಕಾವೇರಿ ಪ್ರೌಢಶಾಲೆ, ವಿವಿ ಪುರಂ ಠಾಣಾ ವ್ಯಾಪ್ತಿಯ ನಿರ್ಮಲ ಕಾನ್ವೆಂಟ್, ಜಯಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯ ಚಿನ್ಮಯ ಪ್ರೌಢಶಾಲೆ, ಸರಸ್ವತಿಪುರಂ ಠಾಣಾ ವ್ಯಾಪ್ತಿಯ ವಿಜಯವಿಠಲ ವಿದ್ಯಾ ಸಂಸ್ಥೆ, ಕುವೆಂಪುನಗರ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ಪ್ರೌಢಶಾಲೆ, ಎನ್.ಆರ್. ಮೊಹಲ್ಲಾ ಠಾಣಾ ವ್ಯಾಪ್ತಿಯ ಸೆಂಟ್ ಫಿಲೋಮಿನಾ ಪ್ರೌಢಶಾಲೆ ವ್ಯಾಪ್ತಿಯ 200 ಮೀ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿದ್ದು, ಈ ಕೇಂದ್ರಗಳ ಸುತ್ತ ಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿ ದಿನ ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

Translate »