ಮೈಸೂರು, ಸೆ.23(ಎಂಟಿವೈ)- ಲಾಕ್ ಡೌನ್ ಸಂದರ್ಭವನ್ನು ಸೇವಾ ಅವಧಿ ಎಂದು ಪರಿಗಣಿಸಿ, ಪದವಿ ಕಾಲೇಜು ಅತಿಥಿ ಉಪ ನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ, ಅವ ರನ್ನೇ ಸೇವೆಯಲ್ಲಿ ಮುಂದುವರೆಸಿ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪ ನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಮೈಸೂರು ಜಿಲ್ಲಾಧಿ ಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿಯ ರಾಜ್ಯ ಸಂಯೋಜಕಿ ಎಂ. ಉಮಾದೇವಿ ಮಾತನಾಡಿ, ರಾಜ್ಯದ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ದುಡಿ ಯುತ್ತಿದ್ದಾರೆ. ಕೆಲವರು 20-25 ವರ್ಷ ಗಳಿಂದ ಅತಿಥಿಗಳಾಗಿಯೇ ಸೇವೆ ಸಲ್ಲಿಸು ತ್ತಿದ್ದಾರೆ. ಅವರ ಕೆಲಸಕ್ಕೆ ಭದ್ರತೆ ಇಲ್ಲವಾ ಗಿದೆ. ಲಾಕ್ಡೌನ್ ಸಮಯದಲ್ಲಿ ತಮ್ಮ ಕೈಯಿಂದಲೇ ಖರ್ಚು ಭರಿಸಿ ಆನ್ಲೈನ್ ತರಗತಿಗಳನ್ನು ಕೂಡ ನಡೆಸಿದ್ದಾರೆ. ಮಾ. 24ರಿಂದ ಜು.31ರವರೆಗಿನ ಅವಧಿಯನ್ನು ಸೇವಾ ಅವಧಿ ಎಂದು ಪರಿಗಣಿಸಿ ವೇತನ ನೀಡಬೇಕೆಂದು ಯುಜಿಸಿಯೇ ನಿರ್ದೇ ಶನ ನೀಡಿದೆ. ಆದರೆ ಸರ್ಕಾರ ಈ ಬಗ್ಗೆ ಮೌನ ವಹಿಸಿದೆ ಎಂದು ಕಿಡಿಕಾರಿದರು.
ಕೋವಿಡ್-19 ಲಾಕ್ಡೌನ್ನಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆ ದುಪ್ಪಟ್ಟಾ ಗಿವೆ. ಆರ್ಥಿಕ ಮುಗ್ಗಟ್ಟಿನಿಂದ 15 ಮಂದಿ ಪದವಿ ಕಾಲೇಜು ಉಪನ್ಯಾಸಕರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಕೆಲವರು ಗಂಭೀರ ಕಾಯಿಲೆಗಳಿಗೆ ಒಳಗಾಗಿ ಆಸ್ಪತ್ರೆಗೆ ತೋರಿಸ ಲಾಗದೆ ಸಾವಿಗೀಡಾಗಿದ್ದಾರೆ. ಹಲವರು ಈಗಲೂ ಗಂಭೀರ ಸ್ವರೂಪದ ಖಾಯಿಲೆ ಗಳಿಂದ ಬಳಲುತ್ತಿದ್ದಾರೆ. ಆರ್ಥಿಕ ಸಂಕಷ್ಟ ದಿಂದ ಬದುಕು ಸಾಗಿಸಲು ಹೆಣಗುತ್ತಿದ್ದಾರೆ. ಈ ಶೈಕ್ಷಣಿಕ ವರ್ಷಕ್ಕೆ ಆರ್ಥಿಕ ಮಿತ ವ್ಯಯದ ನೆಪ ಮುಂದಿಟ್ಟು ಸರ್ಕಾರ ಅತಿಥಿ ಉಪನ್ಯಾಸಕರನ್ನು ಮುಂದುವರಿಸದಿರುವ ಅಥವಾ ಕೈಬಿಡುವ ಮಾತು ಕೇಳಿ ಬರು ತ್ತಿದೆ. ಇದು ಅತಿಥಿ ಉಪನ್ಯಾಸಕರನ್ನು ಇನ್ನಷ್ಟು ಹತಾಶರನ್ನಾಗಿಸಿದೆ. ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕೆಲಸಕ್ಕೆ ಕೈ ಹಾಕಬಾರದು ಎಂದರು. ಹೋರಾಟ ಸಮಿತಿ ಪದಾಧಿಕಾರಿಗಳಾದ ನಂಜುಂಡಸ್ವಾಮಿ, ಸುನೀಲ್, ಹರೀಶ್, ಅಣ್ಣಪ್ಪ, ಅನಿಲ್, ರಮ್ಯ, ಅನಿತಾ, ಸುನಿತಾ ಇತರರು ಪ್ರತಿಭಟನೆಯಲ್ಲಿದ್ದರು.