ಪತ್ರಕರ್ತ ಸಂತೋಷ್ ತಮ್ಮಯ್ಯ ಪ್ರಕರಣ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಪತ್ರ ಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಮೈಸೂರು ಜಿಲ್ಲಾ ನಾಯಕ ಯುವ ಕರ ಸಂಘದ ಕಾರ್ಯಕರ್ತರು ಗುರು ವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪತ್ರಕರ್ತರ ಸ್ವಾತಂತ್ರ್ಯಕ್ಕೆ ಭಂಗ ತರದಿರಿ, ಸಂತೋಷ್ ತಮ್ಮಯ್ಯ ಪ್ರಕರಣ ಕೈಬಿಡಿ ಎಂದು ಪ್ರತಿ ಭಟನಾಕಾರರು ಘೋಷಣೆ ಕೂಗಿದರು.

ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಹರಣ ನಡೆಯುತ್ತಿದೆ. ಸಂತೋಷ್ ತಮ್ಮ ಯ್ಯರಿಗೆ ನ್ಯಾಯ ಕೊಡಿಸಬೇಕು. ಪ್ರಕರಣ ವನ್ನು ಗೃಹ ಇಲಾಖೆ ಗಂಭೀರವಾಗಿ ಪರಿ ಗಣಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ, ರಾಜು ಮಾರ್ಕೆಟ್, ವಿನೋದ್, ಶಶಿಕಲಾ, ಪುರುಷೋತ್ತಮ್, ಅಜಯ್, ತಿಮ್ಮ ನಾಯಕ ಇನ್ನಿತರರು ಭಾಗವಹಿಸಿದ್ದರು.