ಮೈಸೂರು, ಸೆ.29(ಆರ್ಕೆಬಿ)- ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿ ಸಬೇಕು. ಲಾಕ್ಡೌನ್ ಅವಧಿಯ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕ ಮಂಗಳವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಇದು 12ನೇ ವಾರದ ಪ್ರತಿಭಟನೆಯಾಗಿದೆ. ನಮ್ಮ ಬೇಡಿಕೆಗಳನ್ನು ಈಡೇರಿ ಸದೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಅತಿಥಿ ಉಪನ್ಯಾಸಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಸಕ್ತ ಶೈಕ್ಷಣಿಕ ಸಾಲಿಗೂ ಅತಿಥಿ ಉಪನ್ಯಾಸಕರ ಸೇವೆ ಮುಂದು ವರಿಸಬೇಕು. ಎಂಎಚ್ಆರ್ಡಿ ನಿಯಮ ಪಾಲಿಸಿ, ಲಾಕ್ಡೌನ್ ಅವಧಿಯ ಗೌರವಧನ ತುರ್ತಾಗಿ ಬಿಡುಗಡೆಗೊಳಿಸಬೇಕು. ಪಿಎಫ್, ಇಎಸ್ಐ, ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಅತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರ ವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು. ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಬಾಬುರಾಜು ನೇತೃತ್ವದ ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಮುಖಂಡರಾದ ರಾಮಣ್ಣ, ನಾಗಾರ್ಜುನ್, ಕೆಂಪನಂಜಪ್ಪ, ಪ್ರದೀಪ್ ಇದ್ದರು.

ಮೈಸೂರು