ನಾಳೆ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಅಧಿಕಾರಿ, ನೌಕರರ ಧರಣಿ
ಮೈಸೂರು

ನಾಳೆ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಅಧಿಕಾರಿ, ನೌಕರರ ಧರಣಿ

December 10, 2018

ಮೈಸೂರು: ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಮತ್ತು ಕಾವೇರಿ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಆಶ್ರಯದಲ್ಲಿ ಡಿ.11ರಂದು ಬೆಳಿಗ್ಗೆ 10ರಿಂದ ಸಂಜೆ 5.30 ಗಂಟೆವರೆಗೆ ವಿಜಯನಗರ 2ನೇ ಹಂತದಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳ ಸಂಘಗಳ ಪ್ರಧಾನ ಕಾರ್ಯದರ್ಶಿ ಕೆ.ಆರ್. ಕೃಷ್ಣಮೂರ್ತಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಗ್ರಾಮೀಣ ಬ್ಯಾಂಕ್‍ಗಳಲ್ಲಿ ದಿನಗೂಲಿ, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸ ಬೇಕು ಮತ್ತು ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಸರ್ವೋಚ್ಛ ನ್ಯಾಯಾ ಲಯದ ಆದೇಶದಂತೆ ವಾಣಿಜ್ಯ ಬ್ಯಾಂಕುಗಳ ಉದ್ಯೋಗಿಗಳಿಗೆ ನೀಡುವ ನಿವೃತ್ತಿ ವೇತನವನ್ನು ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೂ ಜಾರಿಗೊಳಿಸಬೇಕು 1993ರ ಒಪ್ಪಂದ ದಂತೆ ಗ್ರಾಮೀಣ ಬ್ಯಾಂಕ್ ನೌಕರರಿಗೂ ಕಂಪ್ಯೂಟರ್ ಇಂಕ್ರಿಮೆಂಟ್ ನೀಡಬೇಕು. 10ನೇ ವೇತನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೂ ಜಾರಿಗೊಳಿಸಬೇಕು. ವಾಣಿಜ್ಯ ಬ್ಯಾಂಕಿನಲ್ಲಿರುವಂತೆ ನೇಮಕಾತಿ ಮತ್ತು ಬಡ್ತಿ ಜಾರಿಗೊಳಿಸಬೇಕು. ಗ್ರಾಮೀಣ ಬ್ಯಾಂಕ್ ಖಾಸಗೀಕರಣಗೊಳಿಸಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೈಬಿಡಬೇಕು ಎಂಬುದು ತಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

Translate »