ಬಸವನಹಳ್ಳಿ, ಬ್ಯಾಡಗೊಟ್ಟಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಪಿ.ಐ.ಶ್ರೀವಿದ್ಯಾ ಸೂಚನೆ
ಕೊಡಗು

ಬಸವನಹಳ್ಳಿ, ಬ್ಯಾಡಗೊಟ್ಟಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಪಿ.ಐ.ಶ್ರೀವಿದ್ಯಾ ಸೂಚನೆ

October 7, 2018

ಮಡಿಕೇರಿ:  ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿ ಜನ ಕಟುಂಬಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಆದಷ್ಟು ಶೀಘ್ರ ಕಲ್ಪಿಸಬೇಕು ಎಂದು ಐಟಿಡಿಪಿ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕಟುಂ ಬಗಳಿಗೆ ಒದಗಿಸಲಾಗುತ್ತಿರುವ ಮೂಲ ಸೌಕರ್ಯ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಸವನಹಳ್ಳಿಯ 136 ಮತ್ತು ಬ್ಯಾಡಗೊಟ್ಟದ 152 ಮನೆಗಳ ಕಾಮ ಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗ ಳಲ್ಲಿ ಮುಕ್ತಾಯಗೊಳಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ಬಸವನಹಳ್ಳಿ ಪುನರ್ವಸತಿ ಕೇಂದ್ರದಲ್ಲಿನ ತಾತ್ಕಾಲಿಕ ಶೆಡ್‍ಗಳಲ್ಲಿ ವಾಸವಿರುವ ಕುಟುಂಬಗಳನ್ನು ನಿರ್ಮಿ ಸಿರುವ ಮನೆಗಳಿಗೆ ಸ್ಥಳಾಂತರಿಸಿ ಉಳಿದಿರುವ ಮನೆಗಳ ಕಾಮ ಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳ ಬೇಕು. ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತ ಗತಿಯಲ್ಲಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಸ್ವ ಉದ್ಯೋಗ ಪಡೆಯು ವಂತಾಗಲು ಅಲ್ಲಿ ವಾಸಿಸುವ ಕುಟುಂಬ ಸದಸ್ಯರ ಹೆಸರು ನೋಂದಾಯಿಸಿ ನರೇಗಾ ಯೋಜನೆ ಮುಖಾಂತರ ಅವರಿಗೆ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಮುಖಾಂತರ ಜಿಲ್ಲೆಯಲ್ಲಿ 2 ಸಂಚಾರಿ ಆರೋಗ್ಯ ಘಟಕ ಗಳು ಕಾರ್ಯನಿರ್ವಹಿಸು ತ್ತಿದ್ದು, ಇವುಗಳ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಸರಿಯಾಗಿ ಆರೋಗ್ಯ ಸೇವೆ ಒದಗಿಸದಿದ್ದರೆ ಅವುಗಳನ್ನು ಬದಲಿ ಸಲು ಸೂಕ್ತ ಕ್ರಮ ಕೈಗೊಳ್ಳು ವಂತೆ ಐಟಿಡಿಪಿ ಅಧಿಕಾರಿಗಳಿಗೆ ಸೂಚಿಸಿದರು. ವಾರದಲ್ಲಿ ಒಂದು ದಿನ ಗಿರಿಜನರ ಹಾಡಿಗಳಲ್ಲಿ ಮತ್ತು ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಿಗೆ ವೈದ್ಯರು ಭೇಟಿ ನೀಡಿ ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪುನರ್ವಸತಿ ಕೇಂದ್ರಗಳ ಮೂಲ ಸೌಕರ್ಯಕ್ಕೆ ಸಂಬಂಧಿಸಿ ದಂತೆ ಉಪವಿಭಾಗಾಧಿಕಾರಿ ಟಿ.ಜವರೇಗೌಡ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಹಲವು ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಎಸ್.ಸದಾಶಿವಯ್ಯ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.

Translate »