ಸಂಚಾರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಮೈಸೂರು

ಸಂಚಾರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ

July 25, 2018

ಮೈಸೂರು:  ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆ ಅಂಗವಾಗಿ ದೇವರಾಜ ಸಂಚಾರ ಠಾಣೆ ವತಿಯಿಂದ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು.

ರೋಟರಿ ಐಡಿಯಲ್ ಜಾವಾ ಶಾಲಾ ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಅಗತ್ಯವಾಗಿ ಪಾಲಿಸಿ. ವೇಗದಲ್ಲಿ ವಾಹನ ಚಾಲನೆ ಮಾಡಬೇಡಿ ಹಾಗೂ ಸಾರ್ವಜನಿಕರು ರಸ್ತೆ ದಾಟುವಾಗ ಹಸಿರು ದೀಪವನ್ನು ಗಮನಿಸಿ ದಾಟಬೇಕು ಎಂಬಿತ್ಯಾದಿ ಪೋಸ್ಟರ್ ಮತ್ತು ಭಿತ್ತಿಪತ್ರಗಳನ್ನು ಹಿಡಿದು ಕೆ.ಆರ್.ವೃತ್ತದಿಂದ ಸಾಗಿ ಅರಸು ರಸ್ತೆ, ಜೆಎಲ್‍ಬಿ ರಸ್ತೆ ಮೂಲಕಸಾಗಿ ಕೆಆರ್‌ಎಸ್‌ ರಸ್ತೆಯ ಐಡಿಯಲ್ ಜಾವಾ ರೋಟರಿ ಶಾಲೆಯನ್ನು ತಲುಪಿತು. ಮಾರ್ಗದುದ್ದಕ್ಕೂ ಸಂಚಾರ ನಿಯಮಗಳಿರುವ ಭಿತ್ತಿಪತ್ರಗಳನ್ನು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ವಿತರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ದೇವರಾಜ ಸಂಚಾರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಎಲ್.ಶ್ರೀನಿವಾಸ, ಎಎಸ್‍ಐ ಚಾರ್ಲ್ ಮತ್ತು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

Translate »