ಅರ್ಹ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ಸಾರಿಗೆ ಇಲಾಖೆಯಿಂದ ತಲಾ 3 ಸಾವಿರ ಪರಿಹಾರ
ಮೈಸೂರು

ಅರ್ಹ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ ಸಾರಿಗೆ ಇಲಾಖೆಯಿಂದ ತಲಾ 3 ಸಾವಿರ ಪರಿಹಾರ

May 27, 2021

ಬೆಂಗಳೂರು, ಮೇ 26(ಕೆಎಂಶಿ)- ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್‍ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ 3 ಸಾವಿರ ರೂಪಾಯಿ ಯಷ್ಟು ಆರ್ಥಿಕ ಸಹಾಯ ನೀಡಲು ನಮ್ಮ ಸರ್ಕಾರವು ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ಈ ಪರಿಹಾರ ವಿತರಿ ಸಲು ವ್ಯವಸ್ಥೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆ ಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹು ದಾಗಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ನಾಳೆ (ಮೇ 27) ಮಧ್ಯಾಹ್ನ ದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್‍ಗಳಿಗೆ ನೇರವಾಗಿ ಈ ಪರಿ ಹಾರ ಧನವನ್ನು ವರ್ಗಾಯಿಸಲಾಗು ವುದು. ಬಡ ಚಾಲಕರ ನೆರವಿಗೆ ಮುಂದಾ ಗಿರುವ ನಮ್ಮ ಸರ್ಕಾರದ ಸೌಲಭ್ಯ ವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಸವದಿ ಮನವಿ ಮಾಡಿಕೊಂಡಿ ದ್ದಾರೆ. ಕಳೆದ ಬಾರಿಯೂ ಲಾಕ್‍ಡೌನ್ ಘೋಷಿಸಿದ ಸಂದರ್ಭ ದಲ್ಲಿ ಸಾರಿಗೆ ಇಲಾಖೆಯಿಂದ ಲಕ್ಷಾಂತರ ಮಂದಿ ಅರ್ಹ ಚಾಲಕರಿಗೆ ಪರಿಹಾರಧನವನ್ನು ವಿತರಿಸಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

 

Translate »