ಏ.27, ಗೋಣ ಕೊಪ್ಪಲಿಗೆ ರಾಹುಲ್‍ಗಾಂಧಿ ಭೇಟಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಕೊಡಗು

ಏ.27, ಗೋಣ ಕೊಪ್ಪಲಿಗೆ ರಾಹುಲ್‍ಗಾಂಧಿ ಭೇಟಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

April 25, 2018

ಗೋಣ ಕೊಪ್ಪಲು: ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೆ ರಾಜಕೀಯ ರಂಗು ಏರತೊಡಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ವಾಣ ಜ್ಯ ನಗರ ಗೋಣ ಕೊಪ್ಪಲುವಿಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಪ್ರಚಾ ರಕ್ಕೆ ಆಗಮಿಸುತ್ತಿದ್ದಾರೆ.

ಏ.27ರಂದು ರಾಹುಲ್‍ಗಾಂಧಿ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದು 3 ಗಂಟೆಗೆ ಗೋಣ ಕೊಪ್ಪಲುವಿನ ದಸರಾ ಮೈದಾನದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಧರ್ಮಸ್ಥಳದ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3 ಗಂಟೆಗೆ ಗೋಣ ಕೊಪ್ಪಲು ವಿನ ಕಾವೇರಿ ಕಾಲೇಜು ಮೈದಾನಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ನಂತರ ಕಾಲೇಜು ಆವರಣದಲ್ಲಿರುವ ಕಾವೇರಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದು, ತದನಂತರ ಸಮೀಪದಲ್ಲಿರುವ ವೀರ ಸೇನಾನಿಗಳಾದ ಜನರಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕಾರಿನಲ್ಲಿ ನೇರವಾಗಿ ದಸರಾ ಮೈದಾನಕ್ಕೆ ಆಗಮಿಸಲಿದ್ದು, ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.
ರಾಹುಲ್‍ಗಾಂಧಿ ಭೇಟಿ ಹಿನ್ನಲೆಯಲ್ಲಿ ಮಂಗಳ ವಾರದಂದು ದಸರಾ ಮೈದಾನಕ್ಕೆ ಆಗಮಿಸಿದ ಕೊಡಗು ಜಿಲ್ಲಾ ಎಸ್ಪಿ ರಾಜೇಂದ್ರ ಪ್ರಸಾದ್, ಎಸ್‍ಜಿಪಿ ತಂಡ ಡಿವೈಎಸ್‍ಪಿ ಹಾಗೂ ಹಲವು ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ತಾಲೂಕು ದಂಡಾ ಧಿಕಾರಿಗಳಾದ ಗೋವಿಂದರಾಜ್ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸಿನ ಅಧ್ಯಕ್ಷ ತೀತಿರ ಧರ್ಮಜ, ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಅಜಿತ್ ಅಯ್ಯಪ್ಪ ಮುಂತಾದವರು ಹಾಜರಿದ್ದರು.

Translate »