ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಬಿಂಬಿಸಲ್ಲ: ಚಿದಂಬರಂ
ಮೈಸೂರು

ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಬಿಂಬಿಸಲ್ಲ: ಚಿದಂಬರಂ

October 23, 2018

ಚೆನ್ನೈ:  2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕರೂ ಆಗಿರುವ ಪಿ.ಚಿದಂಬರಂ ಹೇಳಿದ್ದಾರೆ.

ರಾಹುಲ್ ಗಾಂಧಿ ಸೇರಿದಂತೆ ಬೇರೆ ಯಾರನ್ನೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಪಕ್ಷದಿಂದ ಬಿಂಬಿಸುವುದಿಲ್ಲ ಎಂದು ಚಿದಂಬರಂ ಹೇಳಿದ್ದಾರೆ. ಮುಂದಿನ ವರ್ಷ ಏಪ್ರಿಲ್‍ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸು ತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿ ಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು.

ಮುಂದಿನ ಚುನಾ ವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ. ಎನ್‍ಡಿಎ ಜಾಗದಲ್ಲಿ ಜನಪರವಾದ, ವ್ಯಕ್ತಿಗಳಿಗೆ ಸ್ವಾತಂತ್ರ್ಯ ನೀಡುವ, ಪ್ರಗತಿಪರ ಸರ್ಕಾರವನ್ನು ನೋಡುವುದು ನಮ್ಮ ಆಸೆಯಾಗಿದೆ. ತೆರಿಗೆ ಭಯೋ ತ್ಪಾದನೆಯಂತಹ ವಾತಾವರಣವನ್ನು ಸೃಷ್ಟಿಸುವ ಸರ್ಕಾರ ನಮಗೆ ಬೇಡ.

ಮಹಿಳೆಯರು, ಮಕ್ಕಳಿಗೆ ರಕ್ಷಣೆ ನೀಡುವ, ರೈತರನ್ನು ಬೆಳೆಸುವ ಸರ್ಕಾರ ಬೇಕು ಎಂದು ಸಂದರ್ಶನದಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಸ್ಥಳೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳದಂತೆ ನರೇಂದ್ರ ಮೋದಿ ಸರ್ಕಾರ ಬೆದರಿಕೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ಆಪಾದಿಸಿದ್ದಾರೆ. ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂದು ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಿರ್ಧರಿಸಲಿದೆ ಎಂದರು.

ಕಳೆದ 20 ವರ್ಷಗಳಲ್ಲಿ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ರಾಷ್ಟ್ರ ಮಟ್ಟದ ಪಕ್ಷಗಳ ಮತಗಳು ಸ್ಥಳೀಯ ಪಕ್ಷಗಳ ಜೊತೆ ಹರಿದು ಹಂಚಿ ಹೋಗುತ್ತಿವೆ. ಕಾಂಗ್ರೆಸ್ ಮತ್ತು ಬಿಜೆಪಿಯ ಒಟ್ಟಾರೆ ಮತಗಳು ಅರ್ಧಕ್ಕಿಂತಲೂ ಕಡಿಮೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ದರು. ಈ ತಿಂಗಳ ಆರಂಭದಲ್ಲಿ ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆ ಯಲ್ಲಿ ಮೈತ್ರಿ ಪಕ್ಷಗಳು ಬಯಸಿದರೆ ತಾವು ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇದು 2 ಹಂತದ ಪ್ರಕ್ರಿಯೆಯಾಗಿದ್ದು ಮೊದಲು ಒಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆಲ್ಲುವುದು ಮತ್ತು ನಂತರ ಪ್ರಧಾನ ಮಂತ್ರಿ ಯಾರಾಗ ಬೇಕು ಎಂಬುದನ್ನು ನಿರ್ಧರಿಸುವುದಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

Translate »