ರಾಜ್ಯದಲ್ಲಿ 3 ದಿನ ಗುಡುಗು ಸಹಿತ ಮಳೆ

ಬೆಂಗಳೂರು, ಏ.17- ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮೂರು ದಿನಗಳು ಅಕಾಲಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ನಾಳೆ ನಡೆಯುವ ಮೊದಲ ಹಂತದ ಲೋಕಸಭಾ ಚುನಾ ವಣಾ ಮತದಾನದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ. ತಮಿಳುನಾಡು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಪ್ರದೇಶದಲ್ಲಿ ಇಂದು ಸಂಜೆ ಭಾರೀ ಮಳೆ ಸುರಿದಿದ್ದು, ರಾಜ್ಯದ ನಾನಾ ಜಿಲ್ಲೆಗಳಲ್ಲಿಯೂ ಮಳೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಮಧ್ಯಾಹ್ನದ ವೇಳೆಯಲ್ಲಿ ಆನೇಕಲ್ ಬೆಂಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗಿದೆ. ಇದ್ದಕ್ಕಿದ್ದಂತೆ ದಿಢೀರ್ ಆಗಿ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.