ರಮಾಬಾಯಿನಗರದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ
ಮೈಸೂರು

ರಮಾಬಾಯಿನಗರದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ

September 2, 2020

ಮೈಸೂರು, ಸೆ.1 (ಆರ್‍ಕೆಬಿ)- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ದೇಶ ಕಂಡ ಶ್ರೇಷ್ಠ ಹಾಗೂ ಆದರ್ಶ ವ್ಯಕ್ತಿಯಾಗಿದ್ದರು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ರಮಾಬಾಯಿನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಪ್ರಣಬ್ ಮುಖರ್ಜಿ ಕೇಂದ್ರ ಸಚಿವ ರಾಗಿ ಅನೇಕ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಅನೇಕ ಜನಪರ ಕಾರ್ಯಕ್ರಮ ಗಳನ್ನು ಜಾರಿಗೆ ತಂದರು. ಅವರ ಅಗಲಿಕೆ ದೇಶಕ್ಕೆ ಅಪಾರ ನಷ್ಟವಾಗಿದೆ ಎಂದರು. ಈ ಸಂದರ್ಭ ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮಾ ಶಂಕರ್, ಮುಖಂಡರಾದ ರಾಜಮ್ಮ, ಎನ್.ಶಿವಕುಮಾರ್, ಜೇಸುದಾಸ್ ಇತರರಿದ್ದರು.

Translate »