ವಿಕಲಚೇತನರ ಯೋಜನೆಗಳ ನೆರವಿಗೆ ಪುನರ್ವಸತಿ ಕಾರ್ಯಕರ್ತರ ನೇಮಕ
ಚಾಮರಾಜನಗರ

ವಿಕಲಚೇತನರ ಯೋಜನೆಗಳ ನೆರವಿಗೆ ಪುನರ್ವಸತಿ ಕಾರ್ಯಕರ್ತರ ನೇಮಕ

December 4, 2018

ಚಾಮರಾಜನಗರ: ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿಕಲಚೇತನ ರಿಗೆ ಅವರು ಇರುವ ಸ್ಥಳದಲ್ಲಿಯೇ ತಲುಪಿಸಲು ನೆರವಾಗುವ ನಗರ ಪಟ್ಟಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂ ಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಕಲಚೇತನರಿಗೆ ಸರ್ಕಾರಿ ಯೋಜನೆ ಗಳ ಸೌಲಭ್ಯಗಳನ್ನು ಅವರು ಇರುವ ಕಡೆ ತಲುಪಿಸಲು ಗ್ರಾಮೀಣ ಪುನರ್ವಸತಿ ಯೋಜನೆ ಇದೆ. ಇದಕ್ಕಾಗಿ  ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಪುನರ್ವ ಸತಿ ಕಾರ್ಯಕರ್ತರು ಹಾಗೂ ತಾಲೂಕು ಮಟ್ಟದಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಿ ಕೊಂಡಿದ್ದು ಅವರು ಈ ಹಿಂದಿನಿಂದಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ನಗರ ಪಟ್ಟಣ ಪ್ರದೇಶದಲ್ಲಿ ಪುನರ್ವಸತಿ ಕಾರ್ಯ ಕರ್ತರ ನೇಮಕ ವ್ಯವಸ್ಥೆ ಇರಲಿಲ್ಲ. ವಿಕಲ ಚೇತನರಿಗೆ ನೆರವಾಗುವ ಉದ್ದೇಶದಿಂದ ನಗರ ಪಟ್ಟಣ ಪ್ರದೇಶಗಳಲ್ಲಿಯೂ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಕ್ರಮ ವಹಿಸ ಲಾಗುತ್ತಿದೆ ಎಂದರು. ಎಲ್ಲಾ ಇಲಾಖೆಗಳು ವಿಕಲಚೇತನರ ಕಲ್ಯಾಣಕ್ಕಾಗಿ ಶೇ.5ರಷ್ಟು ಅನುದಾನವನ್ನು ಮೀಸಲಿಟ್ಟು ವಿಕಲಚೇತನ ರಿಗೆ ಅನುಕೂಲ ಕರವಾದ ಯೋಜನೆಗಳನ್ನು ಅನುಷ್ಠಾನ ಮಾಡಬೇಕಿದೆ. ಪರಿಣಾಮಕಾರಿ ಯಾಗಿ ಈ ಕೆಲಸ ಮಾಡಿದರೆ ಬಹು ಪಾಲು ಸಮಸ್ಯೆಗಳು ಪರಿಹಾರವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಿವಮ್ಮ, ವಿಶೇಷ ಚೇತನರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಶೇ. 3ರಷ್ಟಿದ್ದ ಅನುದಾನವನ್ನು ಶೇ. 5ಕ್ಕೆ ಹೆಚ್ಚಳ ಮಾಡಲಾಗಿದೆ. ಇದರ ಅನುಸಾರ ಪ್ರತಿ ಇಲಾಖೆಗಳು ವಿಕಲಚೇತನರ ಕಲ್ಯಾಣಕ್ಕಾಗಿ ಅನುದಾನವನ್ನು ವಿನಿಯೋಗಿ ಸಬೇಕಿದೆ. ಸಮರ್ಪಕವಾಗಿ ವಿಕಲಚೇತನರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಸವ ಲತ್ತುಗಳನ್ನು ತಲುಪಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ  ಜೆ. ಯೋಗೀಶ್ ಮಾತನಾಡಿ, ವಿಶೇಷಚೇತನ ರಿಗೆ ಜಾಮೀನುರಹಿತವಾಗಿ ಬ್ಯಾಂಕು ಗಳಲ್ಲಿ ಸಾಲಸೌಲಭ್ಯ ಸಿಗುವಂತಾಗಬೇಕು. ಪ್ರತ್ಯೇಕವಾಗಿ ನಿಗಮದ ಮೂಲಕ ವಿಶೇಷಚೇತನರ ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಯೋಜನೆಗಳನ್ನು ಕೈಗೊಳ್ಳ ಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ವಿಕಲಚೇತನರು ಅಸಾಧ್ಯವಾದ ಸಾಧನೆಯನ್ನು ಮಾಡಬಲ್ಲ ದೃಢ ಮನಸ್ಸಿನವರಾಗಿದ್ದಾರೆ. ಅವರಿಗೆ ನಿರಾಸೆ ಉಂಟುಮಾಡದೆ ಅವರಲ್ಲಿ ಚೈತನ್ಯ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡ ಬೇಕಿದೆ. ಅವರ ನಿರೀಕ್ಷೆಗಳಿಗೆ ಅನುಗುಣವಾಗಿ ಪ್ರಾಮಾಣಿಕವಾಗಿ ಸೌಲಭ್ಯಗಳನ್ನು ನೀಡುವ ಕಾರ್ಯವನ್ನು ಮಾಡಲಿದ್ದೇವೆ ಎಂದರು.

ಜಿಲ್ಲಾ ವಿಕಲಚೇತರ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಮಾತನಾಡಿ ನಮ್ಮ ಅಹವಾಲು ಬೇಡಿಕೆಗಳನ್ನು ಮುಖ್ಯ ಮಂತ್ರಿಯವರೊಂದಿಗೆ ನಿವೇದಿಸಿಕೊಳ್ಳಲು ಜಿಲ್ಲಾಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ಮಹದೇಶ್ವರ ಬೆಟ್ಟದಲ್ಲಿ ನಡೆದ ಮುಖ್ಯಮಂತ್ರಿಯವರ ಕಾರ್ಯಕ್ರಮದ ವೇಳೆ ಅವಕಾಶ ಮಾಡಿಕೊಟ್ಟರು. ಇದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ. ಮುಖ್ಯಮಂತ್ರಿ ಯವರು ಸಹ ನಮ್ಮ ಅಹವಾಲುಗಳನ್ನು ಆಲಿಸಿ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.

ಇದೇವೇಳೆ ಉತ್ತಮ ಕಾರ್ಯ ನಿರ್ವಹಿಸಿದ ಪುನರ್ವಸತಿ ಕಾರ್ಯಕರ್ತ ರನ್ನು ಗಣ್ಯರು ಸನ್ಮಾನಿಸಿದರು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕ್ರೀಡೆ ಸಾಂಸ್ಕøತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ಗಣ್ಯರು ವಿತರಿಸಿದರು.

ದೀಪ ಅಂಧಶಾಲೆಯ ಮಕ್ಕಳು ನಡೆಸಿ ಕೊಟ್ಟ ಗಾಯನ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು. ತಾಲ್ಲೂಕು ಪಂಚಾ ಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾ ಪಂಚಾಯತ್‍ನ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚನ್ನಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಕೆ. ಬೊಮ್ಮಯ್ಯ, ಕೆರೆಹಳ್ಳಿ ನವೀನ್, ತಾಲೂಕು ಪಂಚಾಯತ್ ಸದಸ್ಯ ರಾದ ನಾಗಸುಂದರಮ್ಮ, ಆಶಾ, ಕುಮಾರ ನಾಯಕ, ಅಂಗವಿಕಲರ ಕಲ್ಯಾಣಾಧಿಕಾರಿ ದೊಡ್ಡಪ್ಪ ಮೂಲಿಮನಿ, ಪೃಥ್ವಿದಾಸ್, ಇತ ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ವಿಶೇಷಚೇತನರು ಚಾಮರಾಜೇಶ್ವರ ದೇವಾ ಲಯದಿಂದ ಜೆ.ಎಚ್. ಪಟೇಲ್ ಸಭಾಂ ಗಣದವರೆಗೆ ಜಾಗೃತಿ ಜಾಥಾ ನಡೆಸಿದರು.

Translate »