ಗುಂಡ್ಲುಪೇಟೆ ತಾಲೂಕಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಪಡಿಸಲಾಗುವುದು ಶಾಸಕ ಸಿ.ಎಸ್.ನಿರಂಜನಕುಮಾರ್ ಭರವಸೆ
ಕೊಡಗು

ಗುಂಡ್ಲುಪೇಟೆ ತಾಲೂಕಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಪಡಿಸಲಾಗುವುದು ಶಾಸಕ ಸಿ.ಎಸ್.ನಿರಂಜನಕುಮಾರ್ ಭರವಸೆ

December 4, 2018

ಗುಂಡ್ಲುಪೇಟೆ: ತಾಲೂಕಿನ ಪ್ರಮುಖ ಐತಿಹಾಸಿಕ ಧಾರ್ಮಿಕ ಕೇಂದ್ರಗಳನ್ನು ಪ್ರವಾಸೋದ್ಯಮ ಇಲಾಖೆಯ ನೆರವಿನಿಂದ ಅಭಿವೃದ್ಧಿಪಡಿ ಸಲಾಗುವುದು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.ತಾಲೂಕಿನ ಮಂಚಹಳ್ಳಿ ಸಮೀಪದಲ್ಲಿ ರುವ ಕರಸ್ಥಲ ಶ್ರೀ ನಾಗಲಿಂಗೇಶ್ವರ ಗವಿ ಕ್ಷೇತ್ರದ ಬಳಿ ನಿರ್ಮಿಸಿರುವ ನೂತನ ಶೌಚಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುಂದರ ಪ್ರಕೃತಿಯ ನಡುವೆ ಇರುವ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ನಾಗ ಲಿಂಗೇಶ್ವರರು ತಪಸ್ಸು ಮಾಡಿ ಐಕ್ಯವಾದ ಈ ಸ್ಥಳಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಿ ದ್ದಾರೆ. ಇಲ್ಲಿಗೆ ಬರುವ ಭಕ್ತರು ಹಾಗೂ ಪ್ರವಾಸಿಗಳ ಅನುಕೂಲಕ್ಕೆ ಹೆಚ್ಚಿನ ಸೌಲಭ್ಯ ಗಳನ್ನು ಕಲ್ಪಿಸಲಾಗುವುದು ಮತ್ತು ತಾಲೂಕಿನ ಪ್ರಸಿದ್ಧ ಐತಿಹಾಸಿಕ ತಾಣ ಗಳನ್ನು ಪ್ರವಾಸೋದ್ಯಮ ಇಲಾಖೆ ನೆರವಿ ನೊಂದಿಗೆ ಮತ್ತಷ್ಟು ಅಭಿವೃದ್ದಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿದ್ವಾನ್ ಶ್ರೀ ಶಿವಜ್ಞಾನತೀರ್ಥ ಸ್ವಾಮೀಜಿ, ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಮುಖಂಡ ಆಲತ್ತೂರು ಪ್ರವೀಣ್ ಸೇರಿದಂತೆ ವಿವಿಧ ಘಟಕಗಳ ಪದಾಧಿÁರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.

Translate »