ಉದ್ದಮೊಟ್ಟೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ
ಕೊಡಗು

ಉದ್ದಮೊಟ್ಟೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ

March 25, 2019

ಮಡಿಕೇರಿ: ಕಳೆದ ಆಗಸ್ಟ್ ತಿಂಗ ಳಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂ ಕುಸಿತಕ್ಕೆ ಸಿಲುಕಿ ಮದೆನಾಡು ಗ್ರಾಮ ಪಂಚಾ ಯತಿ ವ್ಯಾಪ್ತಿಗೆ ಒಳಪಡುವ ಉದ್ದಮೊಟ್ಟೆ ಗ್ರಾಮ ದಲ್ಲಿ ಮೂಲಭೂತ ವ್ಯವಸ್ಥೆಗಳೇ ಭೂ ಸಮಾ ಧಿಯಾಗಿದೆ. ಪ್ರಕೃತಿ ವಿಕೋಪ ಘಟಿಸಿ ಏಳು ತಿಂಗಳು ಕಳೆದರೂ ಜಿಲ್ಲಾಡಳಿತ ಸೂಕ್ತ ಸ್ಪಂದನೆ ತೋರಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿ ಗಳು ಪ್ರತಿಭಟನೆ ನಡೆಸಿದರು.

ಪ್ರವಾಹ ಮತ್ತು ಭೂ ಕುಸಿತದಿಂದ ಛಿದ್ರ ವಾಗಿರುವ ಗ್ರಾಮದ ಸಂಪರ್ಕ ಸೇತುವೆಯನ್ನು ಪನರ್ ನಿರ್ಮಿಸಿ ರಸ್ತೆ ಸಂಚಾರವನ್ನು ಸುಗಮ ಗೊಳಿಸಬೇಕೆಂದು ಒತ್ತಾಯಿಸಿರುವ ಉದ್ದಮೊಟ್ಟೆ ನಿವಾಸಿಗಳು, ತಪ್ಪಿದಲ್ಲಿ ಲೋಕಸಭಾ ಚುನಾ ವಣೆಯಲ್ಲಿ ಮತದಾನವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉದ್ದಮೊಟ್ಟೆ ಗ್ರಾಮದಲ್ಲಿ ಪ್ರತಿಭಟನೆ ನಡೆ ಸಿದ ಸಂತ್ರಸ್ತ ಗ್ರಾಮಸ್ಥರು, ಸರಕಾರ ಮತ್ತು ಜಿಲ್ಲಾಡಳಿ ತದ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು. ರಾಜ್ಯ ಸರಕಾರ ಮತ್ತು ಕೊಡಗು ಜಿಲ್ಲಾಡಳಿತ ಉದ್ದಮೊಟ್ಟೆ ಗ್ರಾಮವನ್ನು ಪರಿ ಹಾರ ಕಾಮಗಾರಿಯಲ್ಲಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಸರಕಾರ ಮತ್ತು ಜಿಲ್ಲಾ ಡಳಿತದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪದ ಸಂದರ್ಭ ಉದ್ದಮೊಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಭೂಕುಸಿತ, ಪ್ರವಾಹ ಪರಿಸ್ಥಿತಿ ಯಿಂದ 4 ಜನರು ಸಾವನ್ನಪ್ಪಿದ್ದಾರೆ. ಮಾತ್ರವ ಲ್ಲದೇ, ಉದ್ದಮೊಟ್ಟೆ ಗ್ರಾಮದ ಪ್ರಮುಖ ಸಂಪರ್ಕ ಸೇತುವೆ ಧ್ವಂಸವಾಗಿ ಕಳೆದ ಏಳು ತಿಂಗಳಿನಿಂದ ಗ್ರಾಮಸ್ಥರ ಸಂಚಾರಕ್ಕೆ ತೊಡಕಾಗಿದೆ. ಇದೀಗ ಮತ್ತೆ ಮಳೆಗಾಲ ಪ್ರಾರಂಭವಾದರೆ ಗ್ರಾಮಸ್ಥರು ತುರ್ತು ಸಂದರ್ಭಗಳಲ್ಲಿ ಅಗತ್ಯ ಕೆಲಸ ಕಾರ್ಯಗಳಿಗೆ ತೆರಳಲು ಸಾಧ್ಯವಾಗುವುದಿಲ್ಲ. ಈಗಿನ ಸ್ಥಿತಿಯಲ್ಲಿ ವಾಹನ ಸಂಚಾರವೂ ಸಾಧ್ಯವಿಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ಪ್ರಕೃತಿ ವಿಕೋಪದಿಂದ ಮನೆ, ಆಸ್ತಿ ಕಳೆದು ಕೊಂಡವರಿಗೆ ಮತ್ತು ಹಾನಿ ಸಂಭವಿಸಿದ ಬಹು ತೇಕ ಪ್ರಕರಣಗಳಲ್ಲಿ ಇಂದಿಗೂ ಪರಿಹಾರ ದೊರ ಕಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಸ್ಪಂದನೆ ತೋರುತ್ತಿಲ್ಲ ಎಂದು ಆಕ್ರೋಶ ಹೊರಗೆಡವಿದರು. ಇದೀಗ ಮತ್ತೊಂದು ಮಳೆಗಾಲ ಸಮೀಪಿಸುತ್ತಿದ್ದು, ಮದೆ ನಾಡು ಗ್ರಾಮ ವ್ಯಾಪ್ತಿಯ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಮದೆನಾಡು ಗ್ರಾಮ ಪಂಚಾಯಿತಿಗೆ ಒಳಪ ಡುವ ಕಿರಿಕಿಲ್, ಜೋಡುಪಾಲ, ಉದ್ದಮೊಟ್ಟೆ, ಗ್ರಾಮ ಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಮತ್ತು ಚುನಾಯಿತ ಜನಪ್ರತಿನಿಧಿಗಳು ತಕ್ಷಣವೇ ಗಮನ ಹರಿಸಬೇಕು. ತಪ್ಪಿದ್ದರೆ ಮುಂದಿನ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Translate »