ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ: ಸರ್ಕಾರ ಘೋಷಣೆ
ಮೈಸೂರು

ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ: ಸರ್ಕಾರ ಘೋಷಣೆ

November 20, 2018

ಬೆಂಗಳೂರು:  ಗ್ರಾಮೀಣ ಕರ್ನಾ ಟಕವನ್ನು ಬಯಲು ಬಹಿರ್ದೆಸೆ ಮುಕ್ತವ ನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಈ ಘೋಷಣೆ ಮಾಡಿದರು.

ಆರೋಗ್ಯಕರ ಕರ್ನಾಟಕ ನಿರ್ಮಾಣದ ಕಡೆ ಹೆಜ್ಜೆ ಇಟ್ಟಿದ್ದು, ಗ್ರಾಮೀಣ ಭಾಗದಲ್ಲಿ ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗಿದೆ ಎಂದು ಘೋಷಣೆ ಮಾಡಿ, ನಂತರ ಸತ್ಯ ಮೇವ ಜಯತೆ ಎಂಬ ಭಿತ್ತಿಪತ್ರವನ್ನು ಕೂಡ ಬಿಡುಗಡೆ ಮಾಡಿದರು. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಶೌಚಾಲಯ ನಿರ್ಮಾಣ ದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ ಹೊರತು ಪಡಿಸಿದರೆ ಕರ್ನಾಟಕ 3ನೇ ಸ್ಥಾನದಲ್ಲಿದೆ.

ನಂತರ ಮಾತನಾಡಿದ ಕುಮಾರಸ್ವಾಮಿ, ಪ್ರತಿ ಗ್ರಾಮಕ್ಕೂ ಜಲಧಾರೆ ಯೋಜನೆಯಡಿ ದಿನದ 24 ಗಂಟೆಯೂ ನೀರು ಒದಗಿಸಲು ಉದ್ದೇಶಿಸಲಾಗಿದೆ. ಸುಮಾರು 60 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಪ್ರತಿ ಹಳ್ಳಿಗೂ ಭೂ ಮೇಲ್ಮೈ ನೀರನ್ನು ಒದ ಗಿಸಲು ಉದ್ದೇಶಿಸಲಾಗಿದೆ ಎಂದರು. ಪ್ರತಿ ಕುಟುಂಬಕ್ಕೂ ಶೌಚಾಲಯ ಒದಗಿಸಬೇಕಿದೆ. ಹಾಗೆಯೇ ಪ್ರತಿ ಹಳ್ಳಿಗೂ ಕೂಡ ನೀರು ಒದಗಿಸಬೇಕು. ಪ್ರತಿ ಕುಟುಂಬವೂ ಶೌಚಾ ಲಯ ಬಳಸಿದಾಗ ಸತ್ಯಮೇವ ಜಯತೆ ಘೋಷಣೆಗೆ ನಿಜವಾದ ಅರ್ಥ ಸಿಗಲಿದೆ ಎಂದು ತಿಳಿಸಿದರು.

Translate »