ಮಧ್ಯಂತರ ಚುನಾವಣೆಗೆ ಸದಾನಂದಗೌಡ ವಿರೋಧ
ಮೈಸೂರು

ಮಧ್ಯಂತರ ಚುನಾವಣೆಗೆ ಸದಾನಂದಗೌಡ ವಿರೋಧ

July 22, 2019

ಬೆಂಗಳೂರು, ಜು.21- ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿ ರುವಂತೆ ಮಧ್ಯಂ ತರ ಚುನಾವಣೆಗೆ ಕೇಂದ್ರ ರಾಸಾಯ ನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆಯಿಂದ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಬರುತ್ತದೆ. ಬಿಜೆಪಿ ಸರ್ಕಾರ ಬಂದರೆ ಎಲ್ಲದಕ್ಕೂ ಅಂತ್ಯ ಬೀಳುತ್ತದೆ ಎಂದರು. ಬಿಜೆಪಿ ಸದನದಲ್ಲಿ ಪ್ರಜಾತಂತ್ರಕ್ಕೆ ಗೌರವ ಕೊಟ್ಟು ನಡೆದು ಕೊಳ್ಳುತ್ತಿದೆ. ಮೈತ್ರಿ ಪಕ್ಷಗಳಿಗೆ ಬಹುಮತ ಇಲ್ಲ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರ ಸಂಖ್ಯೆ ನೂರಕ್ಕಿಂತ ಕೆಳಗೆ ಇಳಿಯಲಿದೆ. ನಾಳೆ ಸುಪ್ರೀಂಕೋರ್ಟ್ ನ್ಯಾಯದ ಪರ ತೀರ್ಪು ಕೊಡಲಿದೆ ಅನ್ನುವ ವಿಶ್ವಾಸವಿದೆ ಎಂದರು. ಸಿಎಂ ಕುಮಾರಸ್ವಾಮಿ ನಾಳೆ ವಿಶ್ವಾಸ ಮತ ಯಾಚಿಸದಿದ್ದರೆ ಬಿಜೆಪಿ ಮುಂದೆ ಹಲವು ಮಾರ್ಗಗಳಿವೆ. ಸಾಂವಿ ಧಾನಿಕವಾಗಿ ಹೋರಾಟ ಮಾಡುತ್ತೇವೆ ರಾಜ್ಯಪಾಲರು, ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಕಡೆ ಗಮನ ಕೊಡುತ್ತೇವೆ ಎಂದರು. ರಾಷ್ಟ್ರಪತಿ ಆಳ್ವಿಕೆ ಇದ್ದರೂ ಕುದುರೆ ವ್ಯಾಪಾರ ನಿಲ್ಲಲ್ಲ. ಆದ್ದರಿಂದ ಈ ಎಲ್ಲವೂ ಅಂತ್ಯಗೊಳ್ಳಲು ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರ ಬೇಕು ಎಂದು ಸದಾನಂದಗೌಡ ಹೇಳಿದರು.

Translate »