ಕೈಗಾರಿಕೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಅವಶ್ಯ
ಮೈಸೂರು

ಕೈಗಾರಿಕೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಅವಶ್ಯ

November 4, 2019

ಮೈಸೂರು, ನ.೩(ಎಂಕೆ)- ಕಾರ್ಖಾನೆಗಳ ಸುರಕ್ಷತೆ ಮತ್ತು ಅಭಿವೃದ್ದಿಗೆ ಕೇಂದ್ರ ಶಾಸನ ಕಾಯಿದೆ ಅಳವಡಿಕೆ ಅಗತ್ಯವಾಗಿದೆ ಎಂದು ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಆರೋಗ್ಯ ಮತ್ತು ಸುರಕ್ಷತೆಯ ನಿವೃತ್ತ ನಿರ್ದೇಶಕ ಡಿ.ಸಿ.ಜಗದೀಶ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ದ ವತಿಯಿಂದ ಆಯೋ ಜಿಸಿದ್ದ ‘ಕೈಗಾರಿಕಾ ಆರೋಗ್ಯ, ಸುರಕ್ಷತೆಗೆ ಶಿಫಾರಸ್ಸು ಮಾಡಲಾದ ಅಭ್ಯಾಸಗಳು ಮತ್ತು ಕಾರ್ಮಿಕ ವೇತನ ಸಂಹಿತೆ-೨೦೧೯’ರ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೈಗಾರಿಕೆಗಳಲ್ಲಿ ಸುರಕ್ಷತೆ ಬಹಳ ಗಂಭೀರವಾದ ವಿಚಾರ ವಾಗಿದೆ. ಕಾರ್ಖಾನೆಗಳಲ್ಲಿ ಉಪಯೋಗಿಸುವ ಉಪಕರಣ ಗಳು, ಅಪಾಯಕಾರಿ ರಾಸಾಯನಿಕ ವಸ್ತುಗಳು ಮತ್ತು ವಿಧಾನಗಳು ಸಂಕೀರ್ಣತೆಯಿAದ ಕೂಡಿದ್ದು, ಕಾರ್ಮಿ ಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು ೧೬.೩೫೦ ಕಾರ್ಖಾನೆಗಳಿದ್ದು, ೧೬.೫ ಲಕ್ಷ ಮಂದಿ ಕಾರ್ಮಿಕರಿದ್ದಾರೆ ಎಂದರು.

ಸುರಕ್ಷತೆಯ ಬಗ್ಗೆ ಕಾರ್ಮಿಕರಲ್ಲಿನ ಜ್ಞಾನದ ಕೊರತೆ ಯಿಂದ ಅವಘಡಗಳು ಮತ್ತು ತೊಂದರೆಗಳು ಉಂಟಾಗು ತ್ತವೆ. ಕಾರ್ಖಾನೆಗಳಲ್ಲಿ ಒದಗಿಸಬೇಕಾದ ಅಗತ್ಯ ಸುರಕ್ಷತೆ ಗಳ ಕುರಿತು ಕೇಂದ್ರ ಶಾಸನ ಕಾಯಿದೆ ಜಾರಿಯಲ್ಲಿದ್ದು, ಕಾರ್ಖಾನೆಯ ಆಡಳಿತ ವರ್ಗದವರು ಈ ಶಾಸನವನ್ನು ಅರ್ಥೈಸಿಕೊಂಡು ಅಳವಡಿಸಿಕೊಳ್ಳುವ ಮೂಲಕ ಅವಘಡ ಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಪ್ರತಿ ವರ್ಷ ರಾಜ್ಯದಲ್ಲಿನ ಕಾರ್ಖಾನೆಗಳಲ್ಲಿ ಸುಮಾರು ೫೦ ಮಂದಿ ಕಾರ್ಮಿಕರು ಅವಘಡಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕಾದರೆ ಆಡಳಿತ ವರ್ಗ ರಚನಾ ತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರಬೇಕು. ಕಾರ್ಖಾನೆಗಳಲ್ಲಿ ಸಂಭವಿಸುವ ಅವಘಡಗಳಿಂ ದಾಗಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ತೊಂದರೆ ಉಂಟಾಗುತ್ತದೆ ಮತ್ತು ಕಾರ್ಖಾನೆಯ ಅಭಿವೃದ್ಧಿಗೆ ಮಾರಕ ವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ನ ಉಪ ಪ್ರಧಾನ ವ್ಯವಸ್ಥಾಪಕ ವಿಜಯ ಕುಮಾರ್ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಕರೆನ್ ಲಿರ‍್ಸ್ ಇಂಡಿಯಾ ಪ್ರವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್. ಗೋವಿಂದರಾಜು, ಕಾಸಿಯಾ ಅಧ್ಯಕ್ಷ ರಾಜು, ಉಪಾಧ್ಯಕ್ಷ ಕೆ.ಬಿ.ಅರಸಪ್ಪ, ಎಂ.ಜಿ.ರಾಜಗೋಪಾಲ, ವಿಶ್ವನಾಥ್ ಗೌಡರ್, ಎಸ್.ನಾಗರಾಜು, ಸುರೇಶ್‌ಕುಮಾರ್ ಜೈನ್, ಎನ್.ಸತೀಶ್, ಸಿ.ಎಂ.ಸುಬ್ರಮಣಿಯನ್ ಮತ್ತಿತರರು ಉಪಸ್ಥಿತರಿದ್ದರು.

Translate »