ಸಕಾಲ: ಹಾಸನಕ್ಕೆ ಮೊದಲ ಸ್ಥಾನ ಉಡುಪಿ ದ್ವಿತೀಯ, ಚಿಕ್ಕಮಗಳೂರು ತೃತೀಯ, ಬೀದರ್‍ಗೆ 30ನೇ ಸ್ಥಾನ
ಹಾಸನ

ಸಕಾಲ: ಹಾಸನಕ್ಕೆ ಮೊದಲ ಸ್ಥಾನ ಉಡುಪಿ ದ್ವಿತೀಯ, ಚಿಕ್ಕಮಗಳೂರು ತೃತೀಯ, ಬೀದರ್‍ಗೆ 30ನೇ ಸ್ಥಾನ

May 4, 2019

ಹಾಸನ: ಸರ್ಕಾರದ ಸೌಲಭ್ಯ ಗಳನ್ನು ಪಡೆಯಲು ಜಿಲ್ಲೆಯ ಜನರು ಹೆಚ್ಚು ಆನ್‍ಲೈನ್‍ನ ಮೊರೆ ಹೋಗಿದ್ದು, ಸಕಾಲ ಯೋಜನೆಯಲ್ಲಿ ಹಾಸನ ಜಿಲ್ಲೆಯ ಕಂದಾಯ ಇಲಾಖೆ ರಾಜ್ಯ ದಲ್ಲಿಯೇ ಮೊದಲ ಸ್ಥಾನದಲ್ಲಿದೆ.

ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾ ಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ.
ದೈನಂದಿನ ಪ್ರಗತಿಯ ದಿನಾಂಕ ಮೇ 03 ರಂದು ಸಕಾಲ ಜಿಲ್ಲಾ ಶ್ರೇಯಾಂಕ ಮತ್ತು ಕಂದಾಯ ಇಲಾಖೆಯ ಶ್ರೇಯಾಂಕದಲ್ಲಿ ಹಾಸನ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿರುತ್ತದೆ.

ಉಳಿದಂತೆ ಉಡುಪಿ ಜಿಲ್ಲೆಯು ಅರ್ಜಿ ವಿಲೇವಾರಿಯಲ್ಲಿ 2 ಸ್ಥಾನಗಳಿಸಿದೆ, ಚಿಕ್ಕ ಮಗಳೂರು ಜಿಲ್ಲೆ 3ನೇ ರ್ಯಾಂಕ್ ಗಳಿಸಿದೆ ಬೀದರ್ ಜಿಲ್ಲೆ 30 ನೇ ಸ್ಥಾನ ಗಳಿಸಿದೆ.

ಜನರು ಸರ್ಕಾರಿ ಕಚೇರಿಗಳಿಗೆ ಅಲೆ ದಾಡುವುದನ್ನು ತಪ್ಪಿಸಲು, ಅಕ್ರಮಕ್ಕೆ ಆಸ್ಪದ ನೀಡದಂತೆ ಹಾಗೂ ಅರ್ಜಿ ವಿಲೇ ವಾರಿ ವಿಳಂಬ ಆಗದೆ ಕಾಲಕಾಲಕ್ಕೆ ಜನ ರಿಗೆ ತಲುಪಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ ಕಾಯ್ದೆ’ (ಸಕಾಲ) ಜಾರಿ ಗೊಳಿಸಲಾಯಿತು. ಅದರಂತೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಅದರಡಿ ಅರ್ಜಿ ವಿಲೇವಾರಿಗೆ ಇಲಾಖೆ ಹಾಗೂ ಸೌಲಭ್ಯ ಗಳಿಗೆ ತಕ್ಕಂತೆ ಆಯಾ ಅರ್ಜಿಗಳಿಗೆ ಪ್ರತ್ಯೇಕ ಅವಧಿ ನಿಗದಿ ಮಾಡಲಾಗಿತ್ತು.

ಆ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅರ್ಜಿದಾರ ದೂರು ದಾಖಲಿಸುವ ಹಾಗೂ ಅರ್ಜಿ ವಿಳಂಬಕ್ಕೆ ಕಾರಣ ಪಡೆಯಲು ಅವಕಾಶ ಮಾಡಿ ಕೊಡಲಾಗಿದೆ. ಈ ಯೋಜನೆಯಡಿ ಸಕಾಲದಲ್ಲಿ ಸೇವೆ ಒದಗಿಸುವಲ್ಲಿ ಕರ್ತವ್ಯ ಲೋಪವೆಸಗಿದ ಸಾರ್ವಜನಿಕ ನೌಕರ ಸಕ್ಷಮ ಅಧಿಕಾರಿಯಿಂದ ದಿನಕ್ಕೆ 20ರೂ. ರಂತೆ ಗರಿಷ್ಠ 25ಸಾವಿರ ರೂ.ವರೆಗೆ ದಂಡ ವಸೂಲಿ ಮಾಡಬಹುದು.

ಅರ್ಜಿ ವಿಲೇವಾರಿಗೆ ಕನಿಷ್ಠ 3 ದಿನಗ ಳಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯೊಳಗೆ ಜನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವುದೇ ಸಕಾಲದ ಉದ್ದೇಶವಾಗಿತ್ತು. ಈ ಕಾರ್ಯ ವನ್ನು ಜಿಲ್ಲೆಯ ಕಂದಾಯ ಇಲಾಖೆ ಉತ್ತಮವಾಗಿ ನಿರ್ವಹಿಸಿದೆ.

ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿ ಯನ್ನು ನಿಗದಿತ ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡು ವುದು ಹಾಗೂ 1 ಲಕ್ಷ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಅರ್ಜಿ ಸ್ವೀಕೃತಿ ಮಾಡಿಕೊಂಡಿರು ವುದು. ಇವೆರಡು ಅಂಶಗಳನ್ನು ಪರಿಗ ಣಿಸಿ ಈ ರ್ಯಾಂಕ್‍ನ್ನು ನೀಡಲಾಗುತ್ತದೆ. ಅದ ರಂತೆ ಸಕಾಲ (ಆನ್‍ಲೈನ್)ದಲ್ಲಿ ಅರ್ಜಿ ಗಳನ್ನು ಜಿಲ್ಲೆಯ ಜನರು ಹೆಚ್ಚು ಸಲ್ಲಿಸಿದ್ದು, ಅಧಿಕಾರಿಗಳು ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡಿದ್ದಾರೆ.

ಜಿಲ್ಲಾಡಳಿತದಿಂದ ಅಭಿನಂದನೆ: ಸಕಾಲ ಸೇವೆಯಲ್ಲಿ ಒಟ್ಟಾರೆ ಪ್ರಥಮ ಸ್ಥಾನ ಪಡೆ ಯಲು ಕಾರಣರಾಗಿರುವ ಎಲ್ಲಾ ಅಧಿ ಕಾರಿ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅಭಿ ನಂದನೆ ಸಲ್ಲಿಸಿದ್ದು ಇದೇ ಗುಣಮಟ್ಟ ವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.

ಸಕಲೇಶಪುರ, ಹಾಸನ, ಅರಕಲ ಗೂಡು, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಆಲೂರು, ಅರಸೀ ಕೆರೆ ಸಕಾಲ ಕಾಯ್ದೆಯಡಿ ಹಾಸನ ಜಿಲ್ಲೆ ಪ್ರಗತಿಯಲ್ಲಿ ಪ್ರಥಮ ಶ್ರೇಯಾಂಕ ಪಡೆಯಲು ಸಹಕರಿಸಿದ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಮತ್ತು ನೌಕರರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇದೇ ಶ್ರೇಯಾಂಕವನ್ನು ಮುಂದು ವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. -ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾಧಿಕಾರಿ

Translate »