ಸವಿತಾ ಮಹರ್ಷಿ, ಮಡಿವಾಳ ಮಾಚಿದೇವರು ಕಾಯಕ ಯೋಗಿಗಳು
ಕೊಡಗು

ಸವಿತಾ ಮಹರ್ಷಿ, ಮಡಿವಾಳ ಮಾಚಿದೇವರು ಕಾಯಕ ಯೋಗಿಗಳು

February 12, 2019

ಮಡಿಕೇರಿ: ಸವಿತಾ ಮಹರ್ಷಿ ಮತ್ತು ಮಡಿವಾಳ ಮಾಚಿದೇವರು, ಈ ಇಬ್ಬರು ಮಹನೀಯರು, ‘ಕಾಯಕ ಯೋಗಿಗಳು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವರ್ಣಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಸವಿತಾ ಮಹರ್ಷಿ ಹಾಗೂ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸವಿತಾ ಮಹರ್ಷಿ ಅವರು ಮೂರನೇ ಶತಮಾನದಲ್ಲಿ ಮತ್ತು ಮಡಿವಾಳ ಮಾಚಿ ದೇವರು 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಬಸವಣ್ಣ ಅವರಂತೆ ಕಾಯಕ ತತ್ವದಲ್ಲಿ ನಂಬಿಕೆ ಯುಳ್ಳ ಇವರು, ವೃತ್ತಿಗೆ ಹೆಚ್ಚಿನ ಗೌರವ ನೀಡಿದ್ದರು. ಆ ದಿಸೆಯಲ್ಲಿ ಹಿಂದಿನವರ ಆದರ್ಶವನ್ನು ಮೈಗೂಡಿಸಿಕೊಂಡು, ಯುವ ಜನರು ಮುಖ್ಯವಾಹಿನಿಗೆ ಬರುವಂತಾಗ ಬೇಕು ಎಂದು ಸಲಹೆ ಮಾಡಿದರು.

ಅನಾದಿ ಕಾಲದಲ್ಲಿ ಸಮಾಜ ಸುಧಾ ರಣೆ ಮಾಡಿದವರ ಕಾರ್ಯಗಳನ್ನು ಇಂದಿಗೂ ಸ್ಮರಿಸುತ್ತೇವೆ. ಆ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದಾಗ ಪ್ರತಿಯೊ ಬ್ಬರೂ ಸ್ಮರಿಸುತ್ತಾರೆ. ಆದ್ದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಅವರು ಹೇಳಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಜನರು ಸಂಕಷ್ಟ ಎದುರಿಸಿದ್ದಾರೆ. ಸರ್ಕಾರ ಸಂತ್ರಸ್ತರ ಸಂಕಷ್ಟವನ್ನು ನಿವಾರಿ ಸಲು ಶ್ರಮಿಸುತ್ತಿದೆ. ಆ ದಿಸೆಯಲ್ಲಿ ಮನೆ ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಕಣ್ಮಣಿ ಹೇಳಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶು ಪಾಲ ಶ್ರೀಕುಮಾರ ಮಾತನಾಡಿ, ಸವಿತಾ ಎಂಬುದು ಸೃಷ್ಟಿಕರ್ತರ ಹೆಸರಾಗಿದೆ. ಒಬ್ಬರು ಮುಡಿ, ಮತ್ತೊಬ್ಬರು ಮಡಿ ಕಾಯಕದಲ್ಲಿ ಶ್ರೇಷ್ಠತೆಯನ್ನು ಕಂಡಿದ್ದರು. ಸಮಾಜ ಸುಧಾರಣೆಗಾಗಿ ಇವರು ಶ್ರಮಿಸಿ ದ್ದಾರೆ.

ವೃತ್ತಿಯನ್ನು ಗೌರವಿಸಿ ಸಮಾಜ ದಲ್ಲಿ ಬದಲಾವಣೆ ತರಲು ಶ್ರಮಿಸಿದ್ದಾರೆ ಎಂದು ಅವರು ನುಡಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿ, ಸಮಾ ಜಕ್ಕೆ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸವಿತಾ ಮಹರ್ಷಿಗಳು ಹಾಗೂ ಮಡಿ ವಾಳ ಮಾಚಿದೇವರು ಪ್ರಮುಖರಾಗಿದ್ದಾರೆ. ಅವರಂತೆ ನಡೆದುಕೊಳ್ಳಬೇಕು ಎಂದರು.

ಮೂಢನಂಬಿಕೆಗಳನ್ನು ದೂರವಿಟ್ಟ ಸವಿತ ಮಹರ್ಷಿಗಳು, ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು. ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ, ಸವಿತಾ ಹಾಗೂ ಮಡಿವಾಳ ಮಾಚಿದೇವ ಸಮಾಜದವರು ಕ್ರೀಡಾ ಕೂಟಗಳನ್ನು ಏರ್ಪಡಿಸಿ, ಸಂಘಟಿತರಾಗ ಬೇಕು ಎಂದು ಸಲಹೆ ಮಾಡಿದರು.

ಜಿಪಂ ಉಪಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ, ಕಾಯಕ ನಿಷ್ಠೆಯನ್ನು ತೋರಿಸಿದವರಲ್ಲಿ ಸವಿತಾ ಹಾಗೂ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ ಎಂದರು. ಸವಿತಾ ಸಮಾಜದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವಂತಾಗ ಬೇಕು ಎಂದರು.

ಮಡಿವಾಳ ಸಮಾಜದ ಅಧ್ಯಕ್ಷ ಮಂಜುನಾಥ ಮಾತನಾಡಿ, ಜಿಲ್ಲಾಡ ಳಿತದಿಂದ ಕನ್ನಡ ಸಂಸ್ಕøತಿ ಇಲಾಖೆ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದರು. ಸತೀಶ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ನಡೆಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಸ್ವಾಗತಿಸಿದರು. ಕಲಾವಿದ ಬಿ.ಸಿ.ಶಂಕ ರಯ್ಯ ನಾಡಗೀತೆ ಹಾಡಿದರು. ಮಂಜು ನಾಥ್ ನಿರೂಪಿಸಿ, ವಂದಿಸಿದರು.

Translate »