ಶಾಲಾ-ಕಾಲೇಜು ಮುಚ್ಚುವ ಪರಿಸ್ಥಿತಿ ಎದುರಾಗಿಲ್ಲ: ಸಚಿವ
News

ಶಾಲಾ-ಕಾಲೇಜು ಮುಚ್ಚುವ ಪರಿಸ್ಥಿತಿ ಎದುರಾಗಿಲ್ಲ: ಸಚಿವ

November 30, 2021

ಬೆಂಗಳೂರು,ನ.29(ಕೆಎಂಶಿ)- ಕೋವಿಡ್-19 ಸಂಭಾವ್ಯ ಮೂರನೇ ಅಲೆ ಬಗ್ಗೆ ಆತಂಕ ಬೇಡ, ಶಾಲಾ-ಕಾಲೇಜುಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಿಲ್ಲ ಎಂದು ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ವಸತಿ ಕಾಲೇಜುಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ, ಪ್ರಾಥಮಿಕ ಶಾಲೆ ಗಳ ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿಲ್ಲ ಎಂದರು.

ವಸತಿ ಶಾಲೆಗಳಲ್ಲಿ ಬೇರೆ ಕಡೆಯಿಂದ ವಿದ್ಯಾರ್ಥಿಗಳು ಬಂದಿದ್ದರಿಂದ ಕೊರೊನಾ ಪತ್ತೆಯಾಗಿದ್ದು, ಪೆÇೀಷಕರು ಆತಂಕಪಡುವ ಅವಶ್ಯಕತೆ ಇಲ್ಲ, ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದು, ತಾಂತ್ರಿಕ ಸಲಹಾ ಸಮಿತಿ ಮೇಲ್ವಿಚಾರಣೆಯಲ್ಲಿ
ಶಾಲೆಗಳು ನಡೆಯುತ್ತಿವೆ. ಸಲಹಾ ಸಮಿತಿ ಸೂಚನೆ ನೀಡಿದರೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಕೋವಿಡ್ ನೆಗಟಿವ್ ರಿಪೆÇೀರ್ಟ್ ತರುವುದು ಕಡ್ಡಾಯವಾಗಿದೆ, ಸದ್ಯಕ್ಕೆ ಶಾಲೆಗಳಿಗೆ ರಜೆ ನೀಡುವ ಪ್ರಮೇಯವಿಲ್ಲ, ಒಮ್ರಿಕಾನ್ ಹೊಸ ವೈರಾಣು ಎನ್ನುವುದು ರಾಜ್ಯದಲ್ಲಿ ಪತ್ತೆಯಾಗಿಲ್ಲ, ಆತಂಕಪಡುವ ಪರಿಸ್ಥಿತಿ ಇಲ್ಲ ಎಂದರು. ತಾಂತ್ರಿಕ ಸಲಹಾ ಸಮಿತಿ ನಿರ್ಣಯ ಕೈಗೊಂಡರೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದ ಅವರು, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ, ಸರ್ಕಾರಿ ವಸತಿ ಶಾಲೆಗಳಲ್ಲಿ ಇದುವರೆಗೆ ಯಾವುದೇ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ, ಪೆÇೀಷಕರು ಸಹ ಕೋವಿಡ್ ಮುಂಜಾಗ್ರತಾ ಕ್ರಮವಹಿಸುವಂತೆ ಮನವಿ ಮಾಡಿದರು.

Translate »