ಆರ್‍ಆರ್ ನಗರದಲ್ಲಿ ಸೆಟಾಪ್ ಬಾಕ್ಸ್, ಹಣ ಹಂಚಿಕೆ; ಮುನಿರತ್ನ ಅನರ್ಹಗೊಳಿಸಲು ಡಿಕೆಶಿ ಆಗ್ರಹ
ಮೈಸೂರು

ಆರ್‍ಆರ್ ನಗರದಲ್ಲಿ ಸೆಟಾಪ್ ಬಾಕ್ಸ್, ಹಣ ಹಂಚಿಕೆ; ಮುನಿರತ್ನ ಅನರ್ಹಗೊಳಿಸಲು ಡಿಕೆಶಿ ಆಗ್ರಹ

November 3, 2020

ಬೆಂಗಳೂರು, ನ.2- ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅವರನ್ನು ವೆಚ್ಚ ಮಿತಿ ದಾಟಿ ಸೆಟ್ ಅಪ್ ಬಾಕ್ಸ್ ವಿತರಣೆ, ನಕಲಿ ಮತದಾರರ ಸೃಷ್ಟಿ, ಅಕ್ರಮ ಹಣ ಹಂಚಿಕೆ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಕಣದಿಂದ ತಕ್ಷಣ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಈ ಎಲ್ಲ ಅಕ್ರಮಗಳ ದಾಖಲೆಗಳನ್ನು ಬಿಡು ಗಡೆ ಮಾಡಿದರು. ರಾಜರಾಜೇಶ್ವರಿ ಚುನಾವಣಾ ಕ್ಷೇತ್ರದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಅದನ್ನು ಎಲ್ಲರೂ ನೋಡಿದ್ದಾರೆ. ನಾವು ಕೂಡ ಸರ್ಕಾರ, ಚುನಾವಣಾ ಆಯೋಗ, ಪೆÇಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

ವೆಚ್ಚ ಮಿತಿಗೂ ಹೆಚ್ಚು ಖರ್ಚು: ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಅವರು ಮಾಧ್ಯಮಗಳ ಜತೆ ಮಾತನಾಡುವಾಗ 34 ಸಾವಿರ ಸೆಟ್ಟಾಪ್ ಬಾಕ್ಸ್ ಹಂಚಿ ರುವುದಾಗಿ ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುವುದಾಗಿ ಹೇಳಿದೆ.

ನಾವು 50 ಸಾವಿರ ಸೆಟ್ ಟಾಪ್ ಬಾಕ್ಸ್ ಅಂತಾ ಹೇಳಿ ದ್ದೆವು. ಆದರೆ 34 ಸಾವಿರ ಕೊಟ್ಟಿದ್ದೇನೆ ಅಂತಾ ಬಿಜೆಪಿ ಅಭ್ಯರ್ಥಿ ಒಪ್ಪಿಕೊಂಡಿದ್ದಾರೆ. 34 ಸಾವಿರ ಸೆಟ್ ಟಾಪ್ ಬಾಕ್ಸ್‍ಗೆ ತಲಾ ಸಾವಿರದಂತೆ ಅಂದಾಜು 3.40 ಕೋಟಿ ರೂ. ಆಗುತ್ತದೆ. ಇದನ್ನು ಉಚಿತವಾಗಿ ಹಂಚಿದ್ದಾರೆ. ಕನೆಕ್ಷನ್ 1 ತಿಂಗಳ ಶುಲ್ಕ 150 ರೂ. ಫ್ರೀ ಕೊಟ್ಟರೂ ಹೆಚ್ಚುವರಿ 51 ಲಕ್ಷ ರುಪಾಯಿ ಆಗುತ್ತದೆ. ಚುನಾವಣಾ ಆಯೋಗ ಹಾಗೂ ರಿಟ ರ್ನಿಂಗ್ ಆಫೀಸರ್ ಸೇರಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 173 (62) ಪ್ರಕಾರ ಅವರನ್ನು ಇವತ್ತೇ ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಬೇಕು. ಅವರ ಪಕ್ಷದಲ್ಲಿರುವ ಪಂಡಿತ ರಾಗಲೀ ಹಾಗೂ ನಾಯಕರಾಗಲೀ ಇದನ್ನು ಮುಚ್ಚಿ ಕೊಳ್ಳಲು ಸಾಧ್ಯವಿಲ್ಲ. ಅಭ್ಯರ್ಥಿಯೇ ಈ ಅಕ್ರಮವನ್ನು ಒಪ್ಪಿಕೊಂಡಿದ್ದು, ಸೆಟ್ ಟಾಪ್ ಬಾಕ್ಸ್ ಮೇಲೆ ಅವರ ಫೆÇೀಟೋ, ಹೆಸರು ಇದೆ. ಜತೆಗೆ ಟಿವಿ ಆನ್ ಮಾಡಿದ ತಕ್ಷಣ ಬರುವ ಅವರ ಫೆÇೀಟೋ ಮತ್ತು ಹೆಸರು ಜಾಹೀರಾತು ವೆಚ್ಚಕ್ಕೆ ಸೇರುತ್ತದೆ. ರಾಜ್ಯದ ಎಲ್ಲ ರಾಜಕಾರಣಿಗಳು ಈ ಮಟ್ಟದ ಚುನಾವಣಾ ಅಕ್ರಮ ಕಂಡು ಅಚ್ಚರಿಗೊಂಡಿದ್ದಾರೆ. ಇದೊಂದನ್ನು ಬಿಜೆಪಿ ಅಭ್ಯರ್ಥಿ ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ. ಅಕ್ರಮ ಒಪ್ಪಿಕೊಂಡಿರುವ ಅಭ್ಯರ್ಥಿ ಚುನಾವಣಾ ಕಣದಲ್ಲಿ ಇರಬೇಕೆ? ಬೇಡವೇ? ಎಂಬುದನ್ನು ಪ್ರಜ್ಞಾವಂತ ಮತದಾರ ಯೋಚಿಸಬೇಕು.

ನಕಲಿ ಮತಗಳು: ನನ್ನ 40 ವರ್ಷದ ರಾಜಕಾರಣ ದಲ್ಲಿ ಅಚ್ಚರಿಯಾಗುವ ರೀತಿ ಬಿಜೆಪಿ ಅಭ್ಯರ್ಥಿ ನಕಲಿ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಅಕ್ರಮ ಮಾಡಿದ್ದಾರೆ. ನಮ್ಮ ಕಾರ್ಯಕರ್ತರು ಕಳೆದೊಂದು ತಿಂಗಳಿಂದ ಮನೆ ಮನೆಗೂ ಹೋಗಿ ಸಮೀಕ್ಷೆ ನಡೆಸಿದ್ದು, ಇದರಲ್ಲಿ 42 ಸಾವಿರಕ್ಕೂ ಹೆಚ್ಚು ನಕಲಿ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸ ಲಾಗಿದೆ. ಖಾಲಿ ನಿವೇಶನಗಳ ವಿಳಾಸದಲ್ಲಿ ನಕಲಿ 5 ರಿಂದ 10 ಮತದಾರರ ಹೆಸರು ಸೇರಿಸಲಾಗಿದೆ. ಕೊಟ್ಟಿಗೆಪಾಳ್ಯದ ಡೋಬಿಘಾಟ್‍ನ ಖಾಲಿ ಜಾಗದ ಶೆಡ್‍ವೊಂದರಲ್ಲೇ ಬರೋಬ್ಬರಿ 56 ಮಂದಿ ಹೆಸರು ಸೇರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು, ತಮಿಳು ನಾಡಿನಿಂದ ನಕಲಿ ಮತದಾರರನ್ನು ಕರೆದುಕೊಂಡು ಬಂದು ಇಲ್ಲಿ ಹೆಸರು ಸೇರಿಸಿದ್ದಾರೆ. ಒಂದು ಮನೆಯಲ್ಲಿ ಇಬ್ಬರು ಮೂವರು ಸದಸ್ಯರಿದ್ದರೆ ಅವರಿಗೆ ಗೊತ್ತಿಲ್ಲದೆ ಸುಮಾರು ಐದು, ಹತ್ತು, ಹದಿನೈದು ಜನರ ಹೆಸರನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ನಮ್ಮ ಕಾರ್ಯಕರ್ತರು ನಿಮ್ಮ ಮನೆಯಲ್ಲಿ ಎಂಟು ಮತ ಇದೆ ಎಂದು ಕೇಳಿದರೆ, ಮನೆಯವರೇ ಗಾಬರಿ ಬಿದ್ದು, ಇರುವುದು ಬರೀ ಇಬ್ಬರು, ಮೂವರು ಮಾತ್ರ ಎಂದಿದ್ದಾರೆ. ಈ ಎಲ್ಲದರ ಬಗ್ಗೆ ನನ್ನ ಬಳಿ ದಾಖಲೆ ಇದೆ. ಇಲ್ಲಿ ಬಂದು ಸುಮ್ಮನೆ ಆರೋಪ ಮಾಡುತ್ತಿಲ್ಲ. ಸಾಕ್ಷಿ ಸಮೇತ ಹೇಳುತ್ತಿದ್ದೇನೆ. ಮಾಧ್ಯಮಗಳು ಅಲ್ಲೆಲ್ಲ ಹೋಗಿ ಪರಿಶೀಲಿಸಬೇಕು. ನಾನು ಹೇಳಿರುವುದು ತಪ್ಪಾಗಿದ್ದರೆ ತಾವು ಬೆಳಕು ಚೆಲ್ಲಬೇಕು.

ಹೀಗೆ ರಾಜರಾಜೇಶ್ವರಿ ವಾರ್ಡ್ 160 ಖಾಲಿ ನಿವೇಶನದಲ್ಲಿ, ಬೂತ್ 362 ಮನೆ ಸಂ.14ರಲ್ಲಿ 15 ನಕಲಿ ಮತಗಳು ಸೃಷ್ಟಿಯಾಗಿವೆ. ಇವು ಕೇವಲ ಉದಾಹರಣೆ. ಇಂತಹ ನಕಲಿ ಮತಗಳು ಎಲ್ಲೆಡೆ ಇವೆ. ಎಲ್ಲಿ ಎಷ್ಟು ಜನ ಇದ್ದಾರೆ, ಯಾವುದು ಖಾಲಿ ನಿವೇಶನ ಅಂತಾ ವಿಡಿಯೋ ಮಾಡಿಸಿದ್ದೇನೆ. ಈ ಅಕ್ರಮದಲ್ಲಿ ಅಧಿಕಾರಿಗಳು ಷಾಮೀಲಾಗಿದ್ದಾರೆ. ಅವರ ನೆರವಿಲ್ಲದೆ ಇದನ್ನು ಮಾಡಲು ಸಾಧ್ಯವೇ ಇಲ್ಲ. ಈ ಎಲ್ಲ ಅಕ್ರಮಗಳ ಹಿನ್ನೆಲೆ ಯಲ್ಲಿ ಮತದಾರರು ಮತ ಹಾಕಲು ಹೋದಾಗ ಅಲ್ಲಿನ ಮತದಾರರ ಪಟ್ಟಿಯ ನಿಮ್ಮ ವಿಳಾಸದಲ್ಲಿ ಸೇರಿರುವ ನಕಲಿ ಮತಗಳನ್ನು ಅಲ್ಲೇ ತೆಗೆಸಬೇಕು. ನಿಮ್ಮ ಮನೆ ವಿಳಾಸ ದಲ್ಲಿ, ನಿಮ್ಮ ವೈಯಕ್ತಿಕ ಆಸ್ತಿಯಲ್ಲಿ ಮುನಿರತ್ನ ಬೋಗಸ್ ಮತ ಸೇರಿಸಿ ಈ ಅಕ್ರಮ ಮಾಡುತ್ತಿದ್ದಾರೆ. ನೀವು ನಿಮ್ಮ ಗೌರವ, ಸಾರ್ವಭೌಮತ್ವ ಕಾಪಾಡಿಕೊಳ್ಳಬೇಕು. ನಿಮ್ಮ ವಿಳಾಸದಲ್ಲಿ ಬೇರೆಯವರು ಮತ ಹಾಕಲು ಅವಕಾಶ ನೀಡಬೇಡಿ. ನಾನು ಈ ಬಗ್ಗೆ ಆಯೋಗಕ್ಕೆ ದೂರು ನೀಡುತ್ತೇನೆ. ಈ ಅಕ್ರಮದಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದು, ಸಂಬಂಧಪಟ್ಟವರ ಬಂಧನಕ್ಕೆ ರಿಟರ್ನಿಂಗ್ ಆಫೀಸರ್ ಕ್ರಮ ಕೈಗೊಳ್ಳಬೇಕು. ಮುನಿರತ್ನ ಅವರ ನಕಲಿ ಮತದಾರರ ಗುರುತಿನ ಚೀಟಿ ಬಗ್ಗೆ ಪ್ರಧಾನಿಯವರು, ಸಿ.ಎಂ ಹಾಗೂ ದೇವೇಗೌಡರು ಮಾತನಾಡಿದ್ದಾರೆ. ಇವರ್ಯಾರು ಸಾಕ್ಷಿ ಇಲ್ಲದೆ ಮಾತನಾಡಿಲ್ಲ. ಒಂದೊಮ್ಮೆ ಅವರು ಸುಳ್ಳು ಹೇಳಿದ್ದರೆ ಮುನಿರತ್ನ ಅವರು ಅವರ ವಿರುದ್ಧ ಕೇಸ್ ಹಾಕಬಹುದಿತ್ತು. ಆದರೆ ಕೇಸ್ ಹಾಕದೇ ಅವರ ಆರೋಪಗಳು ನಿಜ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಪೆÇಲೀಸ್ ಇನ್ಸ್‍ಪೆಕ್ಟರ್‍ಗಳು ಕಾರ್ಯಕರ್ತರಿಗೆ ಕಾಲ್ ಮಾಡಿ ಠಾಣೆಗೆ ಕರೆಸುತ್ತಿದ್ದಾರೆ. ಇಂಥವರ ಪರವಾಗಿ ಕೆಲಸ ಮಾಡಿ ಎಂದು ಹುಕುಂ ಚಲಾಯಿಸುತ್ತಿದ್ದಾರೆ. ಅವರ ಬಗ್ಗೆ ಆಯೋಗಕ್ಕೆ ದೂರು ನೀಡುತ್ತೇನೆ. ಮತದಾರರು ಜಾಗೃತರಾಗಬೇಕು. ಇವತ್ತು ಹಣ ಹಂಚುತ್ತಿರುವ ಬಗ್ಗೆ ನೂರಾರು ವಿಡಿಯೋಗಳು ಬರುತ್ತಿವೆ. ಮಾಸ್ಕ್ ಒಳಗೆ 1 ಸಾವಿರ ಇಟ್ಟು ಕೊಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು.

Translate »